<p>ಚಳ್ಳಕೆರೆ: 2019-20ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ಕೆಲ ರೈತರಿಗೆ, ವಿಮಾ ಕಂಪನಿಯಿಂದ ಯಾವುದೇ ಹಣ ಬಂದಿಲ್ಲ. ಹಾಗಾಗಿ ವಂಚಿತ ರೈತರಿಗೆ ಕೂಡಲೇ ಬೆಳೆವಿಮೆಯನ್ನು ತರಿಸಿಕೊಡಬೇಕು ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಅಧಿಕಾರಿಗಳನ್ನು ಆಗ್ರಹಿಸಿದರು.</p>.<p>ಸೋಮವಾರ ತಾಲ್ಲೂಕು ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಒಣ ಭೂಮಿಯಲ್ಲಿ ಉಳುಮೆ ಪ್ರಾರಂಭಿಸಲು ರೈತರು, ಮುಂಗಾರು ಮಳೆಯನ್ನೇ ಎದುರು ನೋಡುತ್ತಿದ್ದಾರೆ. ಆದ್ದರಿಂದ ಇನ್ನು 7–8 ದಿನಗಳಲ್ಲಿ ಬೆಳೆವಿಮೆಯನ್ನು ಖಾತೆಗೆ ಜಮಾ ಮಾಡಿದರೆ ರೈತರ ಕೃಷಿ ಚಟವಟಿಕೆಗೆ ಅನುಕೂಲವಾಗುತ್ತದೆ ಎಂದರು.</p>.<p>ರೈತ ಮುಖಂಡ ಶ್ರೀನಿವಾಸರೆಡ್ಡಿ, ಬೆಳೆವಿಮೆ ಪಾವತಿಸುವ ಸಲುವಾಗಿ ಕೆಲ ರೈತರು ಮನೆಯಲ್ಲಿನ ಆಭರಣಗಳನ್ನು ಒತ್ತೆ ಇಟ್ಟಿದ್ದಾರೆ. ಆದರೂ ವಿಮೆ ಬಂದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಕೋರೊನಾ ಕಾರಣ ರೈತ ಸಮುದಾಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ವಂಚಿತ ರೈತರಿಗೆ ವಿಮೆಯನ್ನು ತರಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಡಾ.ಮೋಹನ್ಕುಮಾರ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹಂಪಣ್ಣ ಮಾತನಾಡಿದರು. ರೈತ ಮುಖಂಡ ಚಂದ್ರಣ್ಣ, ತಿಪ್ಪೇಸ್ವಾಮಿ, ಸುದರ್ಶನ ರೆಡ್ಡಿ ಅವರೂ ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಳ್ಳಕೆರೆ: 2019-20ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ಕೆಲ ರೈತರಿಗೆ, ವಿಮಾ ಕಂಪನಿಯಿಂದ ಯಾವುದೇ ಹಣ ಬಂದಿಲ್ಲ. ಹಾಗಾಗಿ ವಂಚಿತ ರೈತರಿಗೆ ಕೂಡಲೇ ಬೆಳೆವಿಮೆಯನ್ನು ತರಿಸಿಕೊಡಬೇಕು ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ. ಭೂತಯ್ಯ ಅಧಿಕಾರಿಗಳನ್ನು ಆಗ್ರಹಿಸಿದರು.</p>.<p>ಸೋಮವಾರ ತಾಲ್ಲೂಕು ಕಚೇರಿಯಲ್ಲಿ ನಡೆದ ರೈತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>ಒಣ ಭೂಮಿಯಲ್ಲಿ ಉಳುಮೆ ಪ್ರಾರಂಭಿಸಲು ರೈತರು, ಮುಂಗಾರು ಮಳೆಯನ್ನೇ ಎದುರು ನೋಡುತ್ತಿದ್ದಾರೆ. ಆದ್ದರಿಂದ ಇನ್ನು 7–8 ದಿನಗಳಲ್ಲಿ ಬೆಳೆವಿಮೆಯನ್ನು ಖಾತೆಗೆ ಜಮಾ ಮಾಡಿದರೆ ರೈತರ ಕೃಷಿ ಚಟವಟಿಕೆಗೆ ಅನುಕೂಲವಾಗುತ್ತದೆ ಎಂದರು.</p>.<p>ರೈತ ಮುಖಂಡ ಶ್ರೀನಿವಾಸರೆಡ್ಡಿ, ಬೆಳೆವಿಮೆ ಪಾವತಿಸುವ ಸಲುವಾಗಿ ಕೆಲ ರೈತರು ಮನೆಯಲ್ಲಿನ ಆಭರಣಗಳನ್ನು ಒತ್ತೆ ಇಟ್ಟಿದ್ದಾರೆ. ಆದರೂ ವಿಮೆ ಬಂದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ತಹಶೀಲ್ದಾರ್ ಎಂ.ಮಲ್ಲಿಕಾರ್ಜುನ, ಕೋರೊನಾ ಕಾರಣ ರೈತ ಸಮುದಾಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ ವಂಚಿತ ರೈತರಿಗೆ ವಿಮೆಯನ್ನು ತರಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಡಾ.ಮೋಹನ್ಕುಮಾರ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹಂಪಣ್ಣ ಮಾತನಾಡಿದರು. ರೈತ ಮುಖಂಡ ಚಂದ್ರಣ್ಣ, ತಿಪ್ಪೇಸ್ವಾಮಿ, ಸುದರ್ಶನ ರೆಡ್ಡಿ ಅವರೂ ಈ ಸಂದರ್ಭದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>