<p><strong>ಹೊಸದುರ್ಗ</strong>: ಶಾಸಕ ಬಿ.ಜಿ. ಗೋವಿಂದಪ್ಪ ಅವರು ರಾಷ್ಟ್ರೀಯ ಪೋಲಿಯೋ ದಿನದಂದು ಲಸಿಕೆ ನೀಡುವವರು ಬಿಸಿಲಿನ ತಾಪ ತಾಗದಿರಲೆಂದು 400 ಕ್ಕೂ ಅಧಿಕ ಪೋಲಿಯೋ ಕ್ಯಾಪ್ ನೀಡಿದ್ದು, ಶುಕ್ರವಾರ ಕಾಂಗ್ರೆಸ್ ಮುಖಂಡ ಅರುಣ್ ಗೋವಿಂದಪ್ಪ ವಿತರಿಸಿದರು.</p>.<p>'ಪಲ್ಸ್ ಪೋಲಿಯೋ ಹಾಕಲು 15063 ಮಕ್ಕಳನ್ನು ಗುರುತಿಸಲಾಗಿದೆ. ಡಿ. 21 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಪಲ್ಸ್ ಪೋಲಿಯೋ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಡಿ. 22 ರಿಂದ 24 ವರೆಗೆ ಮನೆ ಮನೆಗೆ ಭೇಟಿ ನೀಡಿ, ಪೋಲಿಯೋ ಹನಿ ನೀಡಲಾಗುವುದು. ಈ ಕುರಿತು ಸಿಬ್ಬಂದಿಗಳು, ವಾಹನಗಳ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ವೈದ್ಯ ರಾಘವೇಂದ್ರ ಪ್ರಸಾದ್ ತಿಳಿಸಿದರು.'<br /><br /> ಈ ವೇಳೆ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ರಾಕೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ಸಿದ್ಧರಾಮಪ್ಪ ಸೇರಿದಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಾಗಳು,ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ</strong>: ಶಾಸಕ ಬಿ.ಜಿ. ಗೋವಿಂದಪ್ಪ ಅವರು ರಾಷ್ಟ್ರೀಯ ಪೋಲಿಯೋ ದಿನದಂದು ಲಸಿಕೆ ನೀಡುವವರು ಬಿಸಿಲಿನ ತಾಪ ತಾಗದಿರಲೆಂದು 400 ಕ್ಕೂ ಅಧಿಕ ಪೋಲಿಯೋ ಕ್ಯಾಪ್ ನೀಡಿದ್ದು, ಶುಕ್ರವಾರ ಕಾಂಗ್ರೆಸ್ ಮುಖಂಡ ಅರುಣ್ ಗೋವಿಂದಪ್ಪ ವಿತರಿಸಿದರು.</p>.<p>'ಪಲ್ಸ್ ಪೋಲಿಯೋ ಹಾಕಲು 15063 ಮಕ್ಕಳನ್ನು ಗುರುತಿಸಲಾಗಿದೆ. ಡಿ. 21 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೂತ್ ಮಟ್ಟದಲ್ಲಿ ಪಲ್ಸ್ ಪೋಲಿಯೋ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಡಿ. 22 ರಿಂದ 24 ವರೆಗೆ ಮನೆ ಮನೆಗೆ ಭೇಟಿ ನೀಡಿ, ಪೋಲಿಯೋ ಹನಿ ನೀಡಲಾಗುವುದು. ಈ ಕುರಿತು ಸಿಬ್ಬಂದಿಗಳು, ವಾಹನಗಳ ನಿಯೋಜನೆ, ವಿದ್ಯುತ್ ಸಂಪರ್ಕ ಸೇರಿದಂತೆ ಹಲವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ವೈದ್ಯ ರಾಘವೇಂದ್ರ ಪ್ರಸಾದ್ ತಿಳಿಸಿದರು.'<br /><br /> ಈ ವೇಳೆ ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ರಾಕೇಶ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀನಿವಾಸ್, ಸಿದ್ಧರಾಮಪ್ಪ ಸೇರಿದಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಾಗಳು,ಆಶಾ ಕಾರ್ಯಕರ್ತೆಯರು ಸೇರಿದಂತೆ ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>