‘ಈ ಭಾಗದಲ್ಲಿ ಹೆಚ್ಚು ಉಷ್ಣಾಂಶವಿರುವ ಕಾರಣ ಬಯಲು ಸೀಮೆ ಪ್ರದೇಶ ದಾಳಿಂಬೆಗೆ ಸೂಕ್ತವಾಗಿದೆ. ಜೈವಿಕ, ಕೊಟ್ಟಿಗೆ ಗೊಬ್ಬರ, ಬೇವಿನ ಹಿಂಡಿ ಹಾಕುವುದರಿಂದ ಬೆಳೆಗೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ದುಂಡಾಣು ಅಂಗಮಾರಿ ರೋಗ ನಿಯಂತ್ರಣಕ್ಕೆ ಬರುತ್ತದೆ. ನೀರಿಗೆ ಡ್ರಿಪ್ ಅಳವಡಿಸಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ದಾಳಿಂಬೆ ಬೆಳೆಯನ್ನು ಬೆಳೆಯಲು ಸಾಧ್ಯವಾಗುತ್ತದೆ. ಒಮ್ಮೆ ನಾಟಿ ಮಾಡಿದ ಮೇಲೆ 5- 6 ವರ್ಷ ನಿರಂತರವಾಗಿ ಉತ್ತಮವಾಗಿ ಫಸಲು ಪಡೆಯಬಹುದು’ ಎನ್ನುತ್ತಾರೆ ತೋಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಡಾ.ವಿರೂಪಾಕ್ಷಪ್ಪ.