<p><strong>ಸಿರಿಗೆರೆ</strong>: ಕೃಷಿ ಪಂಪ್ಸೆಟ್ಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಭರಮಸಾಗರ ಸಮೀಪದ ಹೆಗ್ಗೆರೆ ಮತ್ತು ಸುತ್ತಲಿನ ರೈತರು ಗುರುವಾರ ಭರಮಸಾಗರ ಬೆಸ್ಕಾಂ ಕಚೇರಿ ಮತ್ತು ಕೆಪಿಟಿಸಿಎಲ್ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಹಲವು ತಿಂಗಳುಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಬೆಸ್ಕಾಂ ಶಾಖಾಧಿಕಾರಿಗಳು ಹೆಗ್ಗೆರೆ ಸುತ್ತಲಿನ ಕೃಷಿ ಪಂಪ್ಸೆಟ್ಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯದ ತುಂಬೆಲ್ಲ ಕೃಷಿಕರಿಗೆ ದಿನವೊಂದಕ್ಕೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದ್ದರೂ ಇಲ್ಲಿ 5 ಗಂಟೆ ಮಾತ್ರ ನೀಡಲಾಗುತ್ತಿದೆ. ಅದನ್ನೂ ಸಹ ಹಗಲು ಮತ್ತು ರಾತ್ರಿ ಪಾಳಯದಲ್ಲಿ ಹಂಚಿ ನೀಡಲಾಗುತ್ತಿದೆ ಎಂದು ರೈತರು ದೂರಿದರು.</p>.<p>ಹೆಗ್ಗೆರೆ ಭಾಗದಲ್ಲಿ ಕೆಲ ತಿಂಗಳುಗಳಿಂದ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ರೈತರು ರಾತ್ರಿ ವೇಳೆಯಲ್ಲಿ ಜಮೀನುಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಆದ್ದರಿಂದ ಈ ಭಾಗದ ಕೃಷಿಗೆ ಹಗಲು ವೇಳೆಯಲ್ಲಿಯೇ ವಿದ್ಯುತ್ ಒದಗಿಸಬೇಕೆಂದು ಮನವಿ ಮಾಡಿದರು.</p>.<p>ಸ್ಥಳಕ್ಕೆ ಆಗಮಿಸಿದ ಚಿತ್ರದುರ್ಗ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಾಜ್ ರೈತರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಕೃಷಿಕರು ಶಾಖಾಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದರು. ಕೃಷಿಕರ ಮನವಿಗೆ ಅಧಿಕಾರಿಗಳು ಸ್ಪಂದಿಸುವುದಿಲ್ಲ. ಸಮಸ್ಯೆಗಳನ್ನು ಹೇಳಿಕೊಂಡು ಫೋನ್ ಮಾಡಿದರೆ ಸ್ವೀಕರಿಸುವುದಿಲ್ಲ. ವಿದ್ಯುತ್ ಮಾರ್ಗಗಳನ್ನು ಸರಿಯಾಗಿ ದುರಸ್ಥಿ ಮಾಡಿಸಿಲ್ಲವೆಂದು ಆರೋಪಿಸಿದರು.</p>.<p>ಎಇಇ ನಾಗರಾಜ್ ರೈತ ಯುವಕರೊಂದಿಗೆ ಮಾತನಾಡಿ, ಹೆಗ್ಗೆರೆ ಭಾಗದ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಸಾಧ್ಯವಾದ ಮಟ್ಟಿಗೆ ಬಗೆಹರಿಸಲು ಯತ್ನಿಸಲಾಗುವುದು. ನಿರಂತರ ವಿದ್ಯುತ್ ನೀಡಲು ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ಕೃಷಿ ಪಂಪ್ಸೆಟ್ಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಭರಮಸಾಗರ ಸಮೀಪದ ಹೆಗ್ಗೆರೆ ಮತ್ತು ಸುತ್ತಲಿನ ರೈತರು ಗುರುವಾರ ಭರಮಸಾಗರ ಬೆಸ್ಕಾಂ ಕಚೇರಿ ಮತ್ತು ಕೆಪಿಟಿಸಿಎಲ್ ಕೇಂದ್ರಕ್ಕೆ ಬೀಗ ಹಾಕಿ ಪ್ರತಿಭಟನೆ ನಡೆಸಿದರು.</p>.<p>ಹಲವು ತಿಂಗಳುಗಳಿಂದ ಬೇಡಿಕೆ ಸಲ್ಲಿಸುತ್ತಿದ್ದರೂ ಬೆಸ್ಕಾಂ ಶಾಖಾಧಿಕಾರಿಗಳು ಹೆಗ್ಗೆರೆ ಸುತ್ತಲಿನ ಕೃಷಿ ಪಂಪ್ಸೆಟ್ಗಳಿಗೆ ಗುಣಮಟ್ಟದ ವಿದ್ಯುತ್ ಒದಗಿಸುವಲ್ಲಿ ವಿಫಲರಾಗಿದ್ದಾರೆ. ರಾಜ್ಯದ ತುಂಬೆಲ್ಲ ಕೃಷಿಕರಿಗೆ ದಿನವೊಂದಕ್ಕೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದ್ದರೂ ಇಲ್ಲಿ 5 ಗಂಟೆ ಮಾತ್ರ ನೀಡಲಾಗುತ್ತಿದೆ. ಅದನ್ನೂ ಸಹ ಹಗಲು ಮತ್ತು ರಾತ್ರಿ ಪಾಳಯದಲ್ಲಿ ಹಂಚಿ ನೀಡಲಾಗುತ್ತಿದೆ ಎಂದು ರೈತರು ದೂರಿದರು.</p>.<p>ಹೆಗ್ಗೆರೆ ಭಾಗದಲ್ಲಿ ಕೆಲ ತಿಂಗಳುಗಳಿಂದ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ರೈತರು ರಾತ್ರಿ ವೇಳೆಯಲ್ಲಿ ಜಮೀನುಗಳಿಗೆ ಹೋಗಲು ಭಯಪಡುತ್ತಿದ್ದಾರೆ. ಆದ್ದರಿಂದ ಈ ಭಾಗದ ಕೃಷಿಗೆ ಹಗಲು ವೇಳೆಯಲ್ಲಿಯೇ ವಿದ್ಯುತ್ ಒದಗಿಸಬೇಕೆಂದು ಮನವಿ ಮಾಡಿದರು.</p>.<p>ಸ್ಥಳಕ್ಕೆ ಆಗಮಿಸಿದ ಚಿತ್ರದುರ್ಗ ಸಹಾಯಕ ಎಕ್ಸಿಕ್ಯೂಟಿವ್ ಇಂಜಿನಿಯರ್ ನಾಗರಾಜ್ ರೈತರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಕೃಷಿಕರು ಶಾಖಾಧಿಕಾರಿಗಳ ವಿರುದ್ಧ ದೂರು ಸಲ್ಲಿಸಿದರು. ಕೃಷಿಕರ ಮನವಿಗೆ ಅಧಿಕಾರಿಗಳು ಸ್ಪಂದಿಸುವುದಿಲ್ಲ. ಸಮಸ್ಯೆಗಳನ್ನು ಹೇಳಿಕೊಂಡು ಫೋನ್ ಮಾಡಿದರೆ ಸ್ವೀಕರಿಸುವುದಿಲ್ಲ. ವಿದ್ಯುತ್ ಮಾರ್ಗಗಳನ್ನು ಸರಿಯಾಗಿ ದುರಸ್ಥಿ ಮಾಡಿಸಿಲ್ಲವೆಂದು ಆರೋಪಿಸಿದರು.</p>.<p>ಎಇಇ ನಾಗರಾಜ್ ರೈತ ಯುವಕರೊಂದಿಗೆ ಮಾತನಾಡಿ, ಹೆಗ್ಗೆರೆ ಭಾಗದ ರೈತರಿಗೆ ಆಗುತ್ತಿರುವ ತೊಂದರೆಗಳನ್ನು ಸಾಧ್ಯವಾದ ಮಟ್ಟಿಗೆ ಬಗೆಹರಿಸಲು ಯತ್ನಿಸಲಾಗುವುದು. ನಿರಂತರ ವಿದ್ಯುತ್ ನೀಡಲು ಅಧಿಕಾರಿಗಳಿಗೆ ತಿಳಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>