ಚಿತ್ರದುರ್ಗ: ಲೋಕಸಭಾ ಚುನಾವಣೆಯ ಚಿತ್ರದುರ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ಅವರು 80,178 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಇವಿಎಂ ಮತ ಎಣಿಕೆ ಹಾಗೂ ವಿ.ವಿ.ಪ್ಯಾಟ್ ಮತಗಳ ತಾಳೆ ಹಾಕುವ ಪ್ರಕ್ರಿಯೆ ಮುಕ್ತಾಯವಾದ ಬಳಿಕ ಚುನಾವಣಾಧಿಕಾರಿ ಆರ್.ವಿನೋತ್ ಪ್ರಿಯಾ ಅವರು ಅಭ್ಯರ್ಥಿಯ ಗೆಲುವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಬಿಜೆಪಿಯ ನಾರಾಯಣಸ್ವಾಮಿ ಅವರು 6,26,195 ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದರು. ಕಾಂಗ್ರೆಸ್–ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ 5,46,017 ಮತಗಳನ್ನು ಗಳಿಸಿ ಪರಾಭವಗೊಂಡರು. ಸಂಸದರಾಗಿದ್ದ ಚಂದ್ರಪ್ಪ ಪುನರಾಯ್ಕೆ ಬಯಸಿ ಕಣಕ್ಕೆ ಇಳಿದಿದ್ದರು.