<p><strong>ಚಿತ್ರದುರ್ಗ: </strong>ಶರಣರು, ಸಂತರು, ದಾರ್ಶನಿಕರು ಅಂತರಂಗದ ಸಾಧಕರು. ಪ್ರತಿಯೊಬ್ಬರು ಅಂತರಂಗವನ್ನು ಸಾಗುವಳಿ ಮಾಡಬೇಕು ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>ಮುರುಘಾ ಮಠದಲ್ಲಿ ಶರಣಸಂಸ್ಕೃತಿ ಉತ್ಸವಕ್ಕೂ ಮುನ್ನ ನಡೆಯುವ ವಿಶೇಷ ಪ್ರವಚನ ಮಾಲೆಯಲ್ಲಿ ಅವರು ಮಾತನಾಡಿದರು.</p>.<p>‘ತನುವ ತೋಟವ ಮಾಡಿ ಎಂದು ಅಲ್ಲಮರು ಹೇಳಿದ್ದಾರೆ. ಬಹಿರಂಗ ನೋಟದ ಜೊತೆಗೆ ಅಂತರಂಗದ ನೋಟ ಬೇಕು. ಕೃಷಿ ಇಲ್ಲದಿದ್ದರೆ ಮಾನವನಿಗೆ ಅನ್ನ ಸಿಗುವುದಿಲ್ಲ. ಆಹಾರದ ಮೂಲ ಕೃಷಿ. ರೈತರು ಕೃಷಿ ಜೀವನದ ಸಾಧಕರು’ ಎಂದು ಬಣ್ಣಿಸಿದರು.</p>.<p>ಸಂಗಮೇಶ್ವರ ದೇವರು ಮಾತನಾಡಿ, ‘ಸಂಸ್ಕಾರದ ಮುಂದುವರಿದ ರೂಪವೇ ಸಂಸ್ಕೃತಿ. ಜೀವನ ಸಾಧುವನ್ನಾಗಿ ಮಾಡಿಕೊಳ್ಳುವುದೇ ಸಂಸ್ಕಾರ. ಸಮಾಜಕ್ಕೆ ಹಿತವನ್ನು ಕಾಣುವುದನ್ನು ಕಂಡುಕೊಂಡ ಶರಣರು ಸೂರ್ಯ-ಚಂದ್ರರ ಬೆಳಕಿನಂತೆ ಅಂತರಂಗದೊಳಗೆ ಸತ್ಸಂಗ ಎಂಬ ವಚನಗಳನ್ನು ತುಂಬಿದರು’ ಎಂದರು.</p>.<p>ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ‘ಎಲ್ಲ ವಟುಗಳಿಗೆ ಮುರುಘಾ ಮಠ ಆಕರ್ಷಕ ಕೇಂದ್ರ. ಶರಣ ಸಂಸ್ಕೃತಿ ಉತ್ಸವ ಜೀವನೋತ್ಸಾಹ ತುಂಬುತ್ತದೆ. ಎಲ್ಲ ಸಂಸ್ಕೃತಿಗೆ ಮೂಲ ಕೃಷಿ ಎಂದು ಹೇಳಿದರು.</p>.<p>ವೀರಶೈವ ಸಮಾಜದ ಅಧ್ಯಕ್ಷ ಟಿ.ಎಸ್.ಎನ್.ಜಯಣ್ಣ, ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಫಾದರ್ ಎಂ.ಎಸ್.ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಶರಣರು, ಸಂತರು, ದಾರ್ಶನಿಕರು ಅಂತರಂಗದ ಸಾಧಕರು. ಪ್ರತಿಯೊಬ್ಬರು ಅಂತರಂಗವನ್ನು ಸಾಗುವಳಿ ಮಾಡಬೇಕು ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>ಮುರುಘಾ ಮಠದಲ್ಲಿ ಶರಣಸಂಸ್ಕೃತಿ ಉತ್ಸವಕ್ಕೂ ಮುನ್ನ ನಡೆಯುವ ವಿಶೇಷ ಪ್ರವಚನ ಮಾಲೆಯಲ್ಲಿ ಅವರು ಮಾತನಾಡಿದರು.</p>.<p>‘ತನುವ ತೋಟವ ಮಾಡಿ ಎಂದು ಅಲ್ಲಮರು ಹೇಳಿದ್ದಾರೆ. ಬಹಿರಂಗ ನೋಟದ ಜೊತೆಗೆ ಅಂತರಂಗದ ನೋಟ ಬೇಕು. ಕೃಷಿ ಇಲ್ಲದಿದ್ದರೆ ಮಾನವನಿಗೆ ಅನ್ನ ಸಿಗುವುದಿಲ್ಲ. ಆಹಾರದ ಮೂಲ ಕೃಷಿ. ರೈತರು ಕೃಷಿ ಜೀವನದ ಸಾಧಕರು’ ಎಂದು ಬಣ್ಣಿಸಿದರು.</p>.<p>ಸಂಗಮೇಶ್ವರ ದೇವರು ಮಾತನಾಡಿ, ‘ಸಂಸ್ಕಾರದ ಮುಂದುವರಿದ ರೂಪವೇ ಸಂಸ್ಕೃತಿ. ಜೀವನ ಸಾಧುವನ್ನಾಗಿ ಮಾಡಿಕೊಳ್ಳುವುದೇ ಸಂಸ್ಕಾರ. ಸಮಾಜಕ್ಕೆ ಹಿತವನ್ನು ಕಾಣುವುದನ್ನು ಕಂಡುಕೊಂಡ ಶರಣರು ಸೂರ್ಯ-ಚಂದ್ರರ ಬೆಳಕಿನಂತೆ ಅಂತರಂಗದೊಳಗೆ ಸತ್ಸಂಗ ಎಂಬ ವಚನಗಳನ್ನು ತುಂಬಿದರು’ ಎಂದರು.</p>.<p>ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಮಾತನಾಡಿ, ‘ಎಲ್ಲ ವಟುಗಳಿಗೆ ಮುರುಘಾ ಮಠ ಆಕರ್ಷಕ ಕೇಂದ್ರ. ಶರಣ ಸಂಸ್ಕೃತಿ ಉತ್ಸವ ಜೀವನೋತ್ಸಾಹ ತುಂಬುತ್ತದೆ. ಎಲ್ಲ ಸಂಸ್ಕೃತಿಗೆ ಮೂಲ ಕೃಷಿ ಎಂದು ಹೇಳಿದರು.</p>.<p>ವೀರಶೈವ ಸಮಾಜದ ಅಧ್ಯಕ್ಷ ಟಿ.ಎಸ್.ಎನ್.ಜಯಣ್ಣ, ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎ.ಜೆ. ಪರಮಶಿವಯ್ಯ, ಫಾದರ್ ಎಂ.ಎಸ್.ರಾಜು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>