<p><strong>ನಾಯಕನಹಟ್ಟಿ:</strong> ಆಧುನಿಕ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಸೊಗಡುವುಳ್ಳ ಕಥಾವಸ್ತುವನ್ನು ಆಧಾರಿಸಿದ ಚಿತ್ರಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ‘ಕಾಸಿನಸರ’ ಚಲನಚಿತ್ರದ ನಿರ್ಮಾಪಕ ಈ. ದೊಡ್ಡನಾಗಯ್ಯ ಹೇಳಿದರು.</p>.<p>ಹೋಬಳಿಯ ಓಬಯ್ಯನಹಟ್ಟಿ ಗ್ರಾಮದಲ್ಲಿ ಭಾನುವಾರ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಜನತೆಗೆ ಯುಗಾದಿ ಹಬ್ಬದ ಪ್ರಯುಕ್ತ ಆಹಾರ ಸಾಮಗ್ರಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದು ಗ್ರಾಮೀಣ ಪ್ರದೇಶದಲ್ಲಿ ಕೃಷಿ ಪದ್ಧತಿ, ಆಹಾರ, ಉಡುಪು, ಕಲೆ ಸಂಸ್ಕೃತಿ ಹಾಗೂ ಜನರ ಬದುಕಿನ ಮೇಲೆ ಜಾಗತಿಕರಣದ ಪ್ರಭಾವ ಹೆಚ್ಚಾಗಿದ್ದು, ಆರೋಗ್ಯಕರ ವಾತಾವರಣ ಕ್ಷೀಣಿಸಿದೆ. ಬಹುರಾಷ್ಟ್ರೀಯ ಕಂಪನಿಗಳ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯಿಂದ ದೇಸಿ ಆಹಾರ ಪದ್ಧತಿ ಬದಲಾಗಿದೆ’ ಎಂದರು.</p>.<p>‘ಆಧುನಿಕ ಕೃಷಿ ಪದ್ಧತಿಯ ಹೆಸರಲ್ಲಿ ಸಾಂಪ್ರದಾಯಿಕ ಕೃಷಿ ನಶಿಸಿದೆ. ನಿತ್ಯ ನೂರಾರು ರೋಗಗಳಿಗೆ<br />ತುತ್ತಾಗುತ್ತಿದ್ದೇವೆ. ಕೃಷಿಯಲ್ಲಿ ರಾಸಾಯನಿಕಗಳ ಬಳಕೆ ಕಡಿಮೆ ಮಾಡಬೇಕು. ಸಾವಯವ ಪದ್ಧತಿಯ ಮಹತ್ವವನ್ನು ಎಲ್ಲರೂ ಅರಿಯಬೇಕಿದೆ. ಇದೇ ವಿಷಯವನ್ನು ಕಥಾವಸ್ತುವಾಗಿಸಿ ‘ಕಾಸಿನಸರ’ ಚಿತ್ರವನ್ನು ನಿರ್ಮಿಸಲಾಗಿದೆ. ಯುಗಾದಿ ಪ್ರಯುಕ್ತ ಸಂಭ್ರಮಾಚರಣೆ ಮಾಡಲು ಪ್ರತಿಯೊಂದು ಕುಟುಂಬಕ್ಕೂ 850ಕ್ಕೂ ಹೆಚ್ಚು ಆಹಾರ ಸಾಮಗ್ರಿ ಕಿಟ್ ವಿತರಿಸಲಾಗಿದೆ’ ಎಂದರು.</p>.<p>‘ಎತ್ತಪ್ಪ ಜುಂಜಪ್ಪ ಸೇರಿದಂತೆ ಬುಡಕಟ್ಟು ದೈವಗಳ ಬಗ್ಗೆ ಸಿನಿಮಾಗಳ ಬಗ್ಗೆ ಯೋಜನೆ ಸಿದ್ಧವಾಗುತ್ತಿದೆ’ ಎಂದು ಹೇಳಿದರು.</p>.<p>ಗ್ರಾಮಸ್ಥರಾದ ದೊಡ್ಡಜ್ಜಯ್ಯ, ಕಾಕಸೂರಯ್ಯ, ಗ್ರಾ.ಪಂ.ಸದಸ್ಯ ಒ. ಓಬಯ್ಯ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಟೇಲ್ ಜಿ.ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಲಕ್ಷ್ಮಿ, ಗೀತಮ್ಮ, ಮುಖಂಡರಾದ ಜಿ.ಎಸ್.ಪ್ರಭುಸ್ವಾಮಿ, ಪಿ.ಯು. ಸುನೀಲ್ಕುಮಾರ್, ವಿರೂಪಾಕ್ಷಪ್ಪ, ಮಹಾದೇವಣ್ಣ, ಬಸವರಾಜ್, ಹುಚ್ಚಮಲ್ಲಯ್ಯ, ಬಿ.ಗಿರೀಶ್, ಸೋಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ:</strong> ಆಧುನಿಕ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಸೊಗಡುವುಳ್ಳ ಕಥಾವಸ್ತುವನ್ನು ಆಧಾರಿಸಿದ ಚಿತ್ರಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು ಎಂದು ‘ಕಾಸಿನಸರ’ ಚಲನಚಿತ್ರದ ನಿರ್ಮಾಪಕ ಈ. ದೊಡ್ಡನಾಗಯ್ಯ ಹೇಳಿದರು.</p>.<p>ಹೋಬಳಿಯ ಓಬಯ್ಯನಹಟ್ಟಿ ಗ್ರಾಮದಲ್ಲಿ ಭಾನುವಾರ ಚಿತ್ರವು ಯಶಸ್ವಿ ಪ್ರದರ್ಶನ ಕಾಣುತ್ತಿರುವ ಹಿನ್ನೆಲೆಯಲ್ಲಿ ಗ್ರಾಮದ ಜನತೆಗೆ ಯುಗಾದಿ ಹಬ್ಬದ ಪ್ರಯುಕ್ತ ಆಹಾರ ಸಾಮಗ್ರಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಇಂದು ಗ್ರಾಮೀಣ ಪ್ರದೇಶದಲ್ಲಿ ಕೃಷಿ ಪದ್ಧತಿ, ಆಹಾರ, ಉಡುಪು, ಕಲೆ ಸಂಸ್ಕೃತಿ ಹಾಗೂ ಜನರ ಬದುಕಿನ ಮೇಲೆ ಜಾಗತಿಕರಣದ ಪ್ರಭಾವ ಹೆಚ್ಚಾಗಿದ್ದು, ಆರೋಗ್ಯಕರ ವಾತಾವರಣ ಕ್ಷೀಣಿಸಿದೆ. ಬಹುರಾಷ್ಟ್ರೀಯ ಕಂಪನಿಗಳ ಮಾರುಕಟ್ಟೆ ಕೇಂದ್ರಿತ ವ್ಯವಸ್ಥೆಯಿಂದ ದೇಸಿ ಆಹಾರ ಪದ್ಧತಿ ಬದಲಾಗಿದೆ’ ಎಂದರು.</p>.<p>‘ಆಧುನಿಕ ಕೃಷಿ ಪದ್ಧತಿಯ ಹೆಸರಲ್ಲಿ ಸಾಂಪ್ರದಾಯಿಕ ಕೃಷಿ ನಶಿಸಿದೆ. ನಿತ್ಯ ನೂರಾರು ರೋಗಗಳಿಗೆ<br />ತುತ್ತಾಗುತ್ತಿದ್ದೇವೆ. ಕೃಷಿಯಲ್ಲಿ ರಾಸಾಯನಿಕಗಳ ಬಳಕೆ ಕಡಿಮೆ ಮಾಡಬೇಕು. ಸಾವಯವ ಪದ್ಧತಿಯ ಮಹತ್ವವನ್ನು ಎಲ್ಲರೂ ಅರಿಯಬೇಕಿದೆ. ಇದೇ ವಿಷಯವನ್ನು ಕಥಾವಸ್ತುವಾಗಿಸಿ ‘ಕಾಸಿನಸರ’ ಚಿತ್ರವನ್ನು ನಿರ್ಮಿಸಲಾಗಿದೆ. ಯುಗಾದಿ ಪ್ರಯುಕ್ತ ಸಂಭ್ರಮಾಚರಣೆ ಮಾಡಲು ಪ್ರತಿಯೊಂದು ಕುಟುಂಬಕ್ಕೂ 850ಕ್ಕೂ ಹೆಚ್ಚು ಆಹಾರ ಸಾಮಗ್ರಿ ಕಿಟ್ ವಿತರಿಸಲಾಗಿದೆ’ ಎಂದರು.</p>.<p>‘ಎತ್ತಪ್ಪ ಜುಂಜಪ್ಪ ಸೇರಿದಂತೆ ಬುಡಕಟ್ಟು ದೈವಗಳ ಬಗ್ಗೆ ಸಿನಿಮಾಗಳ ಬಗ್ಗೆ ಯೋಜನೆ ಸಿದ್ಧವಾಗುತ್ತಿದೆ’ ಎಂದು ಹೇಳಿದರು.</p>.<p>ಗ್ರಾಮಸ್ಥರಾದ ದೊಡ್ಡಜ್ಜಯ್ಯ, ಕಾಕಸೂರಯ್ಯ, ಗ್ರಾ.ಪಂ.ಸದಸ್ಯ ಒ. ಓಬಯ್ಯ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಟೇಲ್ ಜಿ.ತಿಪ್ಪೇಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯರಾದ ಲಕ್ಷ್ಮಿ, ಗೀತಮ್ಮ, ಮುಖಂಡರಾದ ಜಿ.ಎಸ್.ಪ್ರಭುಸ್ವಾಮಿ, ಪಿ.ಯು. ಸುನೀಲ್ಕುಮಾರ್, ವಿರೂಪಾಕ್ಷಪ್ಪ, ಮಹಾದೇವಣ್ಣ, ಬಸವರಾಜ್, ಹುಚ್ಚಮಲ್ಲಯ್ಯ, ಬಿ.ಗಿರೀಶ್, ಸೋಮಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>