<p>ಹಿರಿಯೂರು: ‘ಕುಟುಂಬ ಪ್ರೇಮದಿಂದ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಕಟ್ಟಿದ ಹಿರಿಯ ನಾಯಕರನ್ನು ಮೂಲೆ ಗುಂಪು ಮಾಡಿದ್ದಾರೆ’ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಮುಕುಡಪ್ಪ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಡಿ.ಎಸ್.ಸದಾನಂದಗೌಡ, ಸಿ.ಟಿ.ರವಿ ಮೊದಲಾದ ಹಿರಿಯ ಬಿಜೆಪಿ ನಾಯಕರನ್ನು ವ್ಯವಸ್ಥಿತ ಸಂಚಿನ ಮೂಲಕ ಸಂಪೂರ್ಣ ಮೂಲೆ ಗುಂಪಾಗಿಸಿದ್ದಾರೆ’ ಎಂದು ಆಪಾದಿಸಿದರು.</p>.<p>‘ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ನಮ್ಮ ಆಸೆ. ಆದರೆ, ರಾಜ್ಯದಲ್ಲಿ ಪಕ್ಷವನ್ನು ಮೂಲೆ ಗುಂಪು ಮಾಡಲು ಅಪ್ಪ, ಮಕ್ಕಳು ಪ್ರಯತ್ನಿಸುತ್ತಿದ್ದಾರೆ’ ಎಂದರು.</p>.<p>‘ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕುರುಬ ಸಮುದಾಯವಿದ್ದರೂ ಬಿಜೆಪಿಯಲ್ಲಿ ಟಿಕೆಟ್ ಕೊಡದೇ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.</p>.<p>ಮುಖಂಡರಾದ ಶಾಂತಕುಮಾರ್, ಪಗಲಬಂಡೆ ಪ್ರದೀಪ್, ಪರಮೇಶ್, ಕೇಶವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಿರಿಯೂರು: ‘ಕುಟುಂಬ ಪ್ರೇಮದಿಂದ ಬಿ.ಎಸ್.ಯಡಿಯೂರಪ್ಪ ಅವರು ಬಿಜೆಪಿ ಕಟ್ಟಿದ ಹಿರಿಯ ನಾಯಕರನ್ನು ಮೂಲೆ ಗುಂಪು ಮಾಡಿದ್ದಾರೆ’ ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಮುಕುಡಪ್ಪ ಶನಿವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.</p>.<p>‘ಕೆ.ಎಸ್.ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಡಿ.ಎಸ್.ಸದಾನಂದಗೌಡ, ಸಿ.ಟಿ.ರವಿ ಮೊದಲಾದ ಹಿರಿಯ ಬಿಜೆಪಿ ನಾಯಕರನ್ನು ವ್ಯವಸ್ಥಿತ ಸಂಚಿನ ಮೂಲಕ ಸಂಪೂರ್ಣ ಮೂಲೆ ಗುಂಪಾಗಿಸಿದ್ದಾರೆ’ ಎಂದು ಆಪಾದಿಸಿದರು.</p>.<p>‘ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬುದು ನಮ್ಮ ಆಸೆ. ಆದರೆ, ರಾಜ್ಯದಲ್ಲಿ ಪಕ್ಷವನ್ನು ಮೂಲೆ ಗುಂಪು ಮಾಡಲು ಅಪ್ಪ, ಮಕ್ಕಳು ಪ್ರಯತ್ನಿಸುತ್ತಿದ್ದಾರೆ’ ಎಂದರು.</p>.<p>‘ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಕುರುಬ ಸಮುದಾಯವಿದ್ದರೂ ಬಿಜೆಪಿಯಲ್ಲಿ ಟಿಕೆಟ್ ಕೊಡದೇ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.</p>.<p>ಮುಖಂಡರಾದ ಶಾಂತಕುಮಾರ್, ಪಗಲಬಂಡೆ ಪ್ರದೀಪ್, ಪರಮೇಶ್, ಕೇಶವ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>