<p><strong>ಚಿತ್ರದುರ್ಗ</strong>: ಕನ್ನಡ ಸಾಹಿತ್ಯ ಪರಿಷತ್ತು ರಾಜಕೀಕರಣಗೊಂಡಿದ್ದು, ಸಾಹಿತ್ಯದ ಗಂಧವೇ ಗೊತ್ತಿಲ್ಲದವರು ಪರಿಷತ್ ಸೇರುತ್ತಿದ್ದಾರೆ. ನಿಜವಾದ ಸಾಹಿತಿಗಳು ಸೇರಿ ಸಾಹಿತ್ಯದ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ.ವಿರೇಂದ್ರಕುಮಾರ್ ಅಭಿಪ್ರಾಯಪಟ್ಟರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜ ತುಂಬಾ ವಿಷಮ ಸ್ಥಿತಿಯತ್ತ ಸಾಗುತ್ತಿದೆ. ಸಂವೇದನಾಶೀಲತೆ ಸತ್ತು ಹೋಗಿದೆ. ಪ್ರೀತಿ–ಪ್ರೇಮ ಸಂಬಂಧ ಸಡಿಲಗೊಂಡಿವೆ. ಆಕ್ರೋಶ, ದ್ವೇಷಪೂರಿತ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಾಹಿತ್ಯ ಮಾತ್ರ ಜನರಿಗೆ ಆಸರೆಯಾಗಬಲ್ಲದು’ ಎಂದು ಹೇಳಿದರು.</p>.<p>‘ಸಾಹಿತ್ಯ ಪರಿಷತ್ತಿಗೆ ಘನತೆ ಇದೆ. ಇದನ್ನು ಕಾಪಾಡುವ ಹೊಣೆ ಪ್ರತಿಯೊಬ್ಬರ ಮೇಲಿದೆ. ಪರಿಷತ್ತಿಗೆ ಸಾಂಸ್ಕೃತಿಕ ಘನತೆ ತಂದುಕೊಡುವ ಅಗತ್ಯವಿದೆ. ಚುನಾವಣೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಆರೋಗ್ಯಕರ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಸೃಷ್ಟಿಸುವ ಸಾಮರ್ಥ್ಯ ದೊಡ್ಡಮಲ್ಲಯ್ಯ ಅವರಲ್ಲಿದೆ. ಸಾಮಾಜಿಕ ನ್ಯಾಯದ ಸೂಕ್ಷ್ಮತೆ ಅವರಿಗೆ ಗೊತ್ತಿದೆ. ಸಾಹಿತ್ಯದ ಘನತೆ ಕುಂದಿಸಲ್ಲ ಎಂಬ ವಿಶ್ವಾಸವಿದೆ. ಅವರು ಸೂಕ್ತ ಅಭ್ಯರ್ಥಿ ಆಗಬಲ್ಲರು’ ಎಂದರು.</p>.<p>ಪುನರಾಯ್ಕೆ ಬಯಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ, ಶಿವಕುಮಾರ್, ಸೋಮಶೇಖರ್, ಷರೀಫಾ ಬಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಕನ್ನಡ ಸಾಹಿತ್ಯ ಪರಿಷತ್ತು ರಾಜಕೀಕರಣಗೊಂಡಿದ್ದು, ಸಾಹಿತ್ಯದ ಗಂಧವೇ ಗೊತ್ತಿಲ್ಲದವರು ಪರಿಷತ್ ಸೇರುತ್ತಿದ್ದಾರೆ. ನಿಜವಾದ ಸಾಹಿತಿಗಳು ಸೇರಿ ಸಾಹಿತ್ಯದ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಪಿ.ವಿರೇಂದ್ರಕುಮಾರ್ ಅಭಿಪ್ರಾಯಪಟ್ಟರು.</p>.<p>ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮಾಜ ತುಂಬಾ ವಿಷಮ ಸ್ಥಿತಿಯತ್ತ ಸಾಗುತ್ತಿದೆ. ಸಂವೇದನಾಶೀಲತೆ ಸತ್ತು ಹೋಗಿದೆ. ಪ್ರೀತಿ–ಪ್ರೇಮ ಸಂಬಂಧ ಸಡಿಲಗೊಂಡಿವೆ. ಆಕ್ರೋಶ, ದ್ವೇಷಪೂರಿತ ವಾತಾವರಣ ನಿರ್ಮಾಣವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಾಹಿತ್ಯ ಮಾತ್ರ ಜನರಿಗೆ ಆಸರೆಯಾಗಬಲ್ಲದು’ ಎಂದು ಹೇಳಿದರು.</p>.<p>‘ಸಾಹಿತ್ಯ ಪರಿಷತ್ತಿಗೆ ಘನತೆ ಇದೆ. ಇದನ್ನು ಕಾಪಾಡುವ ಹೊಣೆ ಪ್ರತಿಯೊಬ್ಬರ ಮೇಲಿದೆ. ಪರಿಷತ್ತಿಗೆ ಸಾಂಸ್ಕೃತಿಕ ಘನತೆ ತಂದುಕೊಡುವ ಅಗತ್ಯವಿದೆ. ಚುನಾವಣೆಯಲ್ಲಿ ಪ್ರತಿಯೊಬ್ಬರು ಜವಾಬ್ದಾರಿಯಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಆರೋಗ್ಯಕರ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಸೃಷ್ಟಿಸುವ ಸಾಮರ್ಥ್ಯ ದೊಡ್ಡಮಲ್ಲಯ್ಯ ಅವರಲ್ಲಿದೆ. ಸಾಮಾಜಿಕ ನ್ಯಾಯದ ಸೂಕ್ಷ್ಮತೆ ಅವರಿಗೆ ಗೊತ್ತಿದೆ. ಸಾಹಿತ್ಯದ ಘನತೆ ಕುಂದಿಸಲ್ಲ ಎಂಬ ವಿಶ್ವಾಸವಿದೆ. ಅವರು ಸೂಕ್ತ ಅಭ್ಯರ್ಥಿ ಆಗಬಲ್ಲರು’ ಎಂದರು.</p>.<p>ಪುನರಾಯ್ಕೆ ಬಯಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ, ಶಿವಕುಮಾರ್, ಸೋಮಶೇಖರ್, ಷರೀಫಾ ಬಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>