<p><strong>ಚಿತ್ರದುರ್ಗ: </strong>ಪರಭಾಷೆಯ ಬಗೆಗಿನ ವ್ಯಾಮೋಹ ಹೆಚ್ಚಾಗಿರುವುದರಿಂದ ಕನ್ನಡಕ್ಕೆ ದುಃಸ್ಥಿತಿ ಒದಗಿಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಉಳಿಸುವ ಕೆಲಸ ಆಗಬೇಕಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸಿದ ಮಾಯಣ್ಣ ಪರವಾಗಿ ಮತಯಾಚನೆಗೆ ಸೋಮವಾರ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಬೆಂಗಳೂರಿನಲ್ಲಿ ಕನ್ನಡ ಮಾತನಾಡುವವರ ಪ್ರಮಾಣ ಶೇ 30 ಮಾತ್ರ. ಕನ್ನಡ ಮಾತನಾಡುವುದೇ ಕೀಳರಿಮೆ ಎಂಬಂತಹ ಸ್ಥಿತಿ ರಾಜಧಾನಿಯಲ್ಲಿ ನಿರ್ಮಾಣವಾಗಿದೆ. ಇದು ಹೀಗೆ ಮುಂದುವರಿದರೆ ಕನ್ನಡಕ್ಕೆ ದೊಡ್ಡ ಅಪಾಯ ಎದುರಾಗಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ತಮಿಳುನಾಡು ಮತ್ತು ಆಂಧ್ರಪ್ರದೇಶದ ಜನರಿಗೆ ಭಾಷೆಯ ಮೇಲಿರುವ ಆತ್ಮಾಭಿಮಾನ ಕನ್ನಡಿಗರಲ್ಲಿ ಕಾಣುತ್ತಿಲ್ಲ. ಕನ್ನಡ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಬಳಲುತ್ತಿವೆ. ನಗರ ಪ್ರದೇಶದಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗುತ್ತಿದೆ. ಆಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವವೂ ಕನ್ನಡವನ್ನು ಅಳಿವಿನ ಅಂಚಿಗೆ ತಳ್ಳುತ್ತಿದೆ’ ಎಂದು ಬೇಸರ ಹೊರಹಾಕಿದರು.</p>.<p>‘ಕನ್ನಡಿಗರು ಪರಭಾಷೆ ದ್ವೇಷಿಗಳಾಗಬಾರದು. ಆದರೆ, ಮಾತೃಭಾಷೆಯ ಆತ್ಮಾಭಿಮಾನವನ್ನು ಕಳೆದುಕೊಳ್ಳಬಾರದು. ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬೆಂಗಳೂರು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕೆಲಸ ಮಾಡಿದ ಮಾಯಣ್ಣ ಕನ್ನಡಿಗರಲ್ಲಿ ಭರವಸೆ ಮೂಡಿಸಿದ್ದಾರೆ. ಕನ್ನಡ ಉಳಿಸುವ ಕೆಲಸವನ್ನು ಅವರು ಸಮರ್ಥವಾಗಿ ಮಾಡಲಿದ್ದಾರೆ’ ಎಂದು ಹೇಳಿದರು.</p>.<p>ಸಾಹಿತಿ ಕಮಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಪರಭಾಷೆಯ ಬಗೆಗಿನ ವ್ಯಾಮೋಹ ಹೆಚ್ಚಾಗಿರುವುದರಿಂದ ಕನ್ನಡಕ್ಕೆ ದುಃಸ್ಥಿತಿ ಒದಗಿಬಂದಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಉಳಿಸುವ ಕೆಲಸ ಆಗಬೇಕಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮಾಜಿ ಸಚಿವೆ ಲೀಲಾದೇವಿ ಆರ್.ಪ್ರಸಾದ್ ಹೇಳಿದರು.</p>.<p>ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ಸ್ಪರ್ಧಿಸಿದ ಮಾಯಣ್ಣ ಪರವಾಗಿ ಮತಯಾಚನೆಗೆ ಸೋಮವಾರ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಬೆಂಗಳೂರಿನಲ್ಲಿ ಕನ್ನಡ ಮಾತನಾಡುವವರ ಪ್ರಮಾಣ ಶೇ 30 ಮಾತ್ರ. ಕನ್ನಡ ಮಾತನಾಡುವುದೇ ಕೀಳರಿಮೆ ಎಂಬಂತಹ ಸ್ಥಿತಿ ರಾಜಧಾನಿಯಲ್ಲಿ ನಿರ್ಮಾಣವಾಗಿದೆ. ಇದು ಹೀಗೆ ಮುಂದುವರಿದರೆ ಕನ್ನಡಕ್ಕೆ ದೊಡ್ಡ ಅಪಾಯ ಎದುರಾಗಲಿದೆ’ ಎಂದು ಕಳವಳ ವ್ಯಕ್ತಪಡಿಸಿದರು.</p>.<p>‘ತಮಿಳುನಾಡು ಮತ್ತು ಆಂಧ್ರಪ್ರದೇಶದ ಜನರಿಗೆ ಭಾಷೆಯ ಮೇಲಿರುವ ಆತ್ಮಾಭಿಮಾನ ಕನ್ನಡಿಗರಲ್ಲಿ ಕಾಣುತ್ತಿಲ್ಲ. ಕನ್ನಡ ಶಾಲೆಗಳು ವಿದ್ಯಾರ್ಥಿಗಳ ಕೊರತೆಯಿಂದ ಬಳಲುತ್ತಿವೆ. ನಗರ ಪ್ರದೇಶದಲ್ಲಿ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗುತ್ತಿದೆ. ಆಂಗ್ಲ ಮಾಧ್ಯಮ ಶಿಕ್ಷಣದ ಪ್ರಭಾವವೂ ಕನ್ನಡವನ್ನು ಅಳಿವಿನ ಅಂಚಿಗೆ ತಳ್ಳುತ್ತಿದೆ’ ಎಂದು ಬೇಸರ ಹೊರಹಾಕಿದರು.</p>.<p>‘ಕನ್ನಡಿಗರು ಪರಭಾಷೆ ದ್ವೇಷಿಗಳಾಗಬಾರದು. ಆದರೆ, ಮಾತೃಭಾಷೆಯ ಆತ್ಮಾಭಿಮಾನವನ್ನು ಕಳೆದುಕೊಳ್ಳಬಾರದು. ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಬೆಂಗಳೂರು ಜಿಲ್ಲಾ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕೆಲಸ ಮಾಡಿದ ಮಾಯಣ್ಣ ಕನ್ನಡಿಗರಲ್ಲಿ ಭರವಸೆ ಮೂಡಿಸಿದ್ದಾರೆ. ಕನ್ನಡ ಉಳಿಸುವ ಕೆಲಸವನ್ನು ಅವರು ಸಮರ್ಥವಾಗಿ ಮಾಡಲಿದ್ದಾರೆ’ ಎಂದು ಹೇಳಿದರು.</p>.<p>ಸಾಹಿತಿ ಕಮಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>