ಒಳಮಠ ದೇವಾಲಯದ ಪ್ರಧಾನ ಅರ್ಚಕರಾಗಿದ್ದ ಸಿ.ರಾಜಣ್ಣ ಅವರಿಗೆ ಆರೋಗ್ಯ ಸಮಸ್ಯೆಗಳಿದ್ದವು. ಹೀಗಾಗಿ, ತಮ್ಮ ಜತೆ ಕಾರ್ಯನಿರ್ವಹಿಸಲು ಅಣ್ಣನ ಮಗನಾದ ಪಿ.ಆರ್.ರವಿಕುಮಾರ್ ಅವರ ನೆರವನ್ನು ಪಡೆಯುತ್ತಿದ್ದರು. ಇವರಿಗೆ ದೇವಾಲಯ ವ್ಯವಸ್ಥಾಪನಾ ಮಂಡಳಿಯಿಂದ ಯಾವುದೇ ಆದೇಶ, ವೇತನವಾಗಲಿ, ಗೌರವಧನವನ್ನು ಸಹ ನೀಡಿಲ್ಲ. ರಾಜಣ್ಣ ಅವರು ನಿವೃತ್ತಿಯಾದ ನಂತರ ವ್ಯವಸ್ಥಾಪನ ಮಂಡಳಿ ರವಿಕುಮಾರ್ ಅವರನ್ನು ಹೊರತುಪಡಿಸಿ ಇಬ್ಬರು ಅರ್ಚಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿದೆ.