ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರ ಪೈಕಿ ಕೆಲವರು ಶಾಸಕರನ್ನು ಕರೆಯಿಸಿ ಉದ್ಘಾಟಿಸಿಬೇಕು ಎಂದರೆ, ಮತ್ತೆ ಕೆಲವರು ಕೇಂದ್ರ ಸಚಿವರಾದ ನಾರಾಯಣಸ್ವಾಮಿ ಅವರನ್ನು ಕರೆಯಿಸಿ ಉದ್ಘಾಟನೆ ಮಾಡಿಸಿಬೇಕು ಎಂದು ಹೇಳುತ್ತಿದ್ದಾರೆ. ಗೊಂದಲಗಳ ಕಾರಣ ಆಸ್ಪತ್ರೆ ಉದ್ಘಾಟನೆಯನ್ನು ಕಳೆದ ಡಿಸೆಂಬರ್ 22ಕ್ಕೆ ನಿಗದಿಪಡಿಸಲಾಗಿತ್ತು. ಆ ದಿನಾಂಕ ಮುಂದೆ ಹೋಗುತ್ತಲೇ ಇದೆ. ಇದರಿಂದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರಾದ ತಿಪ್ಪೇಸ್ವಾಮಿ, ಅನಿಲ, ಗುಂಡ, ಬಸವರಾಜ, ಪ್ರಕಾಶ್ ದೂರಿದ್ದಾರೆ.