<p><strong>ಚಿತ್ರದುರ್ಗ</strong>: ಜಿಲ್ಲೆಯ ಮಹಾತ್ವಾಕಾಂಕ್ಷಿ ಯೋಜನೆಗಳಾದ ಭದ್ರಾ ಮೇಲ್ದಂಡೆ ಹಾಗೂ ನೇರ ರೈಲು ಮಾರ್ಗಕ್ಕೆ ಮೀಸಲಿಟ್ಟ ಅನುದಾನದ ಬಗ್ಗೆ ರಾಜ್ಯ ಬಜೆಟ್ನಲ್ಲಿ ಸ್ಪಷ್ಟತೆ ಕಾಣುತ್ತಿಲ್ಲ. ಕೇಂದ್ರ ಸರ್ಕಾರದ ನೆರವು ಪಡೆದ ಈ ಯೋಜನೆಗಳಿಗೆ ತನ್ನ ಪಾಲು ನೀಡಿ ಅನುಷ್ಠಾಗೊಳಿಸುವ ಆಶ್ವಾಸನೆಯನ್ನಷ್ಟೇ ಮುಖ್ಯಮಂತ್ರಿ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ನಲ್ಲಿ ಜಿಲ್ಲೆಗೆ ಹೊಸ ಕೊಡುಗೆಗಳು ಸಿಕ್ಕಿಲ್ಲ. ದಶಕದಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳು ಬಜೆಟ್ನಲ್ಲಿ ಮತ್ತೆ ಘೋಷಣೆಯಾಗಿವೆ. ಚುನಾವಣೆ ಹೊಸ್ತಿಲಲ್ಲಿ ಮಂಡನೆಯಾಗುವ ಬಜೆಟ್ನಲ್ಲಿ ಜಿಲ್ಲೆಗೆ ವಿಶೇಷ ಕೊಡುಗೆ ಲಭ್ಯವಾಗಬಹುದು ಎಂಬ ಜನರ ನಿರೀಕ್ಷೆ ಹುಸಿಯಾಗಿದೆ.</p>.<p class="Subhead">ನೇರ ರೈಲು ಮಾರ್ಗ: ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗ ನಿರ್ಮಾಣ ಯೋಜನೆ ಘೋಷಣೆಯಾಗಿ ದಶಕ ಕಳೆದಿದೆ. ಕೇಂದ್ರ ಮತ್ತು ರಾಜ್ಯ 50:50 ವೆಚ್ಚ ಹಂಚಿಕೆ ಆಧಾರದಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಒಡಂಬಡಿಕೆ ಮಾಡಿಕೊಂಡಿವೆ. ಭೂಸ್ವಾಧೀನ ಪ್ರಕ್ರಿಯೆ, ಅನುದಾನದ ಕೊರತೆಯಿಂದಾಗಿ ಇದು ನನೆಗುದಿಗೆ ಬಿದ್ದಿದೆ. ನೇರ ರೈಲು ಮಾರ್ಗದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ₹ 220 ಕೋಟಿ ಅನುದಾನವನ್ನು ಪ್ರಸಕ್ತ ಬಜೆಟ್ನಲ್ಲಿ ಮೀಸಲಿಟ್ಟಿದೆ. ‘ಈ ಕಾಮಗಾರಿಗೆ ರಾಜ್ಯ ಸರ್ಕಾರವೂ ತನ್ನ ಪಾಲು ನೀಡಲಿದೆ’ ಎಂದಷ್ಟೇ ಹೇಳಿರುವ ಮುಖ್ಯಮಂತ್ರಿ, ರಾಜ್ಯದಿಂದ ದೊರೆಯಲಿರುವ ಅನುದಾನದ ಮೊತ್ತವನ್ನು ತಿಳಿಸಿಲ್ಲ.</p>.<p>ಚಿಕ್ಕಜಾಜೂರು–ಹುಬ್ಬಳ್ಳಿ ರೈಲು ಮಾರ್ಗದ ದ್ವಿಪಥ ನಿರ್ಮಾಣಕ್ಕೆ ₹ 150 ಕೋಟಿಯನ್ನು ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಮೀಸಲಿಟ್ಟಿದೆ. ಈ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ತನ್ನ ಪಾಲು ನೀಡುವ ಆಶ್ವಾಸನೆ ನೀಡಿದೆ.</p>.<p class="Subhead">‘ಭದ್ರಾ ಮೇಲ್ದಂಡೆ ತ್ವರಿತ’: ಮಧ್ಯ ಕರ್ನಾಟಕದ ಬಯಲುಸೀಮೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ಬಹು ನಿರೀಕ್ಷಿತ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹ 5,300 ಕೋಟಿ ಅನುದಾನವನ್ನು ನಿಗದಿಪಡಿಸಿದೆ. ರಾಷ್ಟ್ರೀಯ ಯೋಜನೆ ಘೋಷಣೆ ಮಾಡಿ ಅನುದಾನ ನೀಡಬೇಕು ಎಂಬ ರಾಜ್ಯದ ಕೋರಿಕೆಯನ್ನು ಭಾಗಶಃ ಪರಿಗಣಿಸಿರುವ ಕೇಂದ್ರ, ಉದಾರ ನೆರವು ನೀಡಿದೆ. ಈ ಕೊಡುಗೆಗೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿರುವ ಮುಖ್ಯಮಂತ್ರಿ, ‘ಯೋಜನೆಯ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದಷ್ಟೇ ತಿಳಿಸಿದ್ದಾರೆ.</p>.<p class="Subhead">ಸರ್ಕಾರಿ ವೈದ್ಯಕೀಯ ಕಾಲೇಜು:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹ 500 ಕೋಟಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿಯವರು ಬಜೆಟ್ನಲ್ಲಿ ಘೋಷಿಸಿದ್ದಾರೆ. ಸ್ಥಳ ವಿವಾದದ ಕಾರಣಕ್ಕೆ ಇದು ಸಾಕಾರಗೊಳ್ಳುವುದು ಯಾವಾಗ ಎಂಬುದು ಇನ್ನೂ ಸ್ಪಷ್ಟವಾಗುತ್ತಿಲ್ಲ.</p>.<p>2013ರ ಬಜೆಟ್ನಲ್ಲಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆಯಾಗಿತ್ತು. ಚುನಾವಣೆ, ಬಜೆಟ್ ಸಂದರ್ಭದಲ್ಲಿ ದಶಕದಿಂದಲೂ ಇದು ಚರ್ಚೆಯಾಗುತ್ತಿದೆ. ರಾಜಕೀಯ ಸ್ಥಿತ್ಯಂತರ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯ ಕಾರಣಕ್ಕೆ ಇನ್ನೂ ಅನುಷ್ಠಾನದ ಹಂತದಲ್ಲಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕಾಲೇಜು ಸ್ಥಾಪನೆಗೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಉತ್ಸುಕರಾಗಿದ್ದಾರೆ. ನಗರದ ಹೊರಗೆ ಕಾಲೇಜು ನಿರ್ಮಿಸಲು ಸಂಸದ ಎ.ನಾರಾಯಣಸ್ವಾಮಿ ಮುಂದಾಗಿದ್ದಾರೆ. ಈ ಸ್ಥಳದ ಕುರಿತ ಜಿಜ್ಞಾಸೆಯ ನಡುವೆ ಕಾಲೇಜು ಸ್ಥಾಪನೆ ಇನ್ನಷ್ಟು ವಿಳಂಬವಾಗಲಿದೆ ಎಂಬುದು ಸಾರ್ವಜನಿಕರ ಅನುಮಾನ.</p>.<p>ಬಜೆಟ್: ಜಿಲ್ಲೆಗೆ ಸಿಕ್ಕಿರುವುದು ಏನು?</p>.<p>ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಘೋಷಣೆ</p>.<p>ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗಕ್ಕೆ ರಾಜ್ಯದ ಪಾಲಿನ ಭರವಸೆ</p>.<p>ಚಿತ್ರದುರ್ಗ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹ 500 ಕೋಟಿ</p>.<p>ಚಿಕ್ಕಜಾಜೂರು–ಹುಬ್ಬಳ್ಳಿ ರೈಲ್ವೆ ದ್ವಿಪಥ ಮಾರ್ಗ ನಿರ್ಮಾಣಕ್ಕೆ ಅನುದಾನದ ಭರವಸೆ.</p>.<p>ಸಮಗ್ರ ಟೌನ್ಶಿಪ್ ನಿರ್ಮಾಣಕ್ಕೆ ಖಾಸಗಿ ಸಂಸ್ಥೆಗಳಿಗೆ ಆಹ್ವಾನ.</p>.<p>ಗಣಿಬಾಧಿತ ಪ್ರದೇಶದ ಪರಿಸರ ಪುನಶ್ಚೇತನ ಅಭಿವೃದ್ಧಿ ಯೋಜನೆಯಡಿಚಿತ್ರದುರ್ಗ ಜಿಲ್ಲೆಯ ಗಣಿಬಾಧಿತ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಕ್ಕೆ ಒತ್ತು.</p>.<p>ಮೊಳಕಾಲ್ಮುರಿನಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಿಂದ ಕೈಗಾರಿಕಾ ವಸಾಹತು ಸ್ಥಾಪನೆ</p>.<p>ಚಿತ್ರದುರ್ಗ-ದಾವಣಗೆರೆ-ಹಾವೇರಿಯ ಆರು ಪಥದ ಹೆದ್ದಾರಿ ಅಭಿವೃದ್ಧಿಗೆ ₹2,611 ಕೋಟಿ ಅನುದಾನ</p>.<p>ಸಿರಿಧಾನ್ಯ ಬೆಳೆಗಾರರಿಗೆ ₹ 10 ಸಾವಿರ ಪ್ರೋತ್ಸಾಹ ಧನ ಮುಂದುವರಿಕೆ. ಸಿರಿಧಾನ್ಯ ಸಂಸ್ಕರಣೆ, ಗ್ರೇಡಿಂಗ್ ಹಾಗೂ ಪ್ಯಾಕಿಂಗ್ಗೆ ‘ರೈತ ಉನ್ನತಿ ಯೋಜನೆ’ಯಡಿ ಪ್ರಾಶಸ್ತ್ಯ</p>.<p>ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳ ಪ್ರೋತ್ಸಾಹ ಧನ ₹ 2,000ದಿಂದ ₹ 5,000ಕ್ಕೆ ಏರಿಕೆ</p>.<p>ವೈದ್ಯಕೀಯ ಕಾಲೇಜು ಘೋಷಣೆಯಾಗಿ ಹಲವು ವರ್ಷ ಕಳೆದರೂ ಸ್ಥಾಪನೆಗೆ ಸರ್ಕಾರ ಮೀನ–ಮೇಷ ಎಣಿಸುತ್ತಿದೆ. ಭದ್ರಾ ಮೇಲ್ದಂಡೆ ವಿಚಾರದಲ್ಲಿ ಮುಖ್ಯಮಂತ್ರಿ ಜಾಣ ಕುರುಡುತನ ಪ್ರದರ್ಶಿಸಿದ್ದಾರೆ.</p>.<p>-ಬಿ.ಎನ್. ಚಂದ್ರಪ್ಪ, ಮಾಜಿ ಸಂಸದ</p>.<p>ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಯಾದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹ 500 ಕೋಟಿ ಸಿಕ್ಕಿದೆ. ಕೈಗಾರಿಕಾ ವಸಾಹತು ನಿರ್ಮಾಣ, ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ನೀಡಿದ್ದು ಸ್ವಾಗತಾರ್ಹ.</p>.<p><em><strong>-ಎ.ಮುರುಳಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಜಿಲ್ಲೆಯ ಮಹಾತ್ವಾಕಾಂಕ್ಷಿ ಯೋಜನೆಗಳಾದ ಭದ್ರಾ ಮೇಲ್ದಂಡೆ ಹಾಗೂ ನೇರ ರೈಲು ಮಾರ್ಗಕ್ಕೆ ಮೀಸಲಿಟ್ಟ ಅನುದಾನದ ಬಗ್ಗೆ ರಾಜ್ಯ ಬಜೆಟ್ನಲ್ಲಿ ಸ್ಪಷ್ಟತೆ ಕಾಣುತ್ತಿಲ್ಲ. ಕೇಂದ್ರ ಸರ್ಕಾರದ ನೆರವು ಪಡೆದ ಈ ಯೋಜನೆಗಳಿಗೆ ತನ್ನ ಪಾಲು ನೀಡಿ ಅನುಷ್ಠಾಗೊಳಿಸುವ ಆಶ್ವಾಸನೆಯನ್ನಷ್ಟೇ ಮುಖ್ಯಮಂತ್ರಿ ನೀಡಿದ್ದಾರೆ.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ನಲ್ಲಿ ಜಿಲ್ಲೆಗೆ ಹೊಸ ಕೊಡುಗೆಗಳು ಸಿಕ್ಕಿಲ್ಲ. ದಶಕದಿಂದ ನನೆಗುದಿಗೆ ಬಿದ್ದಿರುವ ಯೋಜನೆಗಳು ಬಜೆಟ್ನಲ್ಲಿ ಮತ್ತೆ ಘೋಷಣೆಯಾಗಿವೆ. ಚುನಾವಣೆ ಹೊಸ್ತಿಲಲ್ಲಿ ಮಂಡನೆಯಾಗುವ ಬಜೆಟ್ನಲ್ಲಿ ಜಿಲ್ಲೆಗೆ ವಿಶೇಷ ಕೊಡುಗೆ ಲಭ್ಯವಾಗಬಹುದು ಎಂಬ ಜನರ ನಿರೀಕ್ಷೆ ಹುಸಿಯಾಗಿದೆ.</p>.<p class="Subhead">ನೇರ ರೈಲು ಮಾರ್ಗ: ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗ ನಿರ್ಮಾಣ ಯೋಜನೆ ಘೋಷಣೆಯಾಗಿ ದಶಕ ಕಳೆದಿದೆ. ಕೇಂದ್ರ ಮತ್ತು ರಾಜ್ಯ 50:50 ವೆಚ್ಚ ಹಂಚಿಕೆ ಆಧಾರದಲ್ಲಿ ಈ ಯೋಜನೆ ಅನುಷ್ಠಾನಗೊಳಿಸುವ ಒಡಂಬಡಿಕೆ ಮಾಡಿಕೊಂಡಿವೆ. ಭೂಸ್ವಾಧೀನ ಪ್ರಕ್ರಿಯೆ, ಅನುದಾನದ ಕೊರತೆಯಿಂದಾಗಿ ಇದು ನನೆಗುದಿಗೆ ಬಿದ್ದಿದೆ. ನೇರ ರೈಲು ಮಾರ್ಗದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ₹ 220 ಕೋಟಿ ಅನುದಾನವನ್ನು ಪ್ರಸಕ್ತ ಬಜೆಟ್ನಲ್ಲಿ ಮೀಸಲಿಟ್ಟಿದೆ. ‘ಈ ಕಾಮಗಾರಿಗೆ ರಾಜ್ಯ ಸರ್ಕಾರವೂ ತನ್ನ ಪಾಲು ನೀಡಲಿದೆ’ ಎಂದಷ್ಟೇ ಹೇಳಿರುವ ಮುಖ್ಯಮಂತ್ರಿ, ರಾಜ್ಯದಿಂದ ದೊರೆಯಲಿರುವ ಅನುದಾನದ ಮೊತ್ತವನ್ನು ತಿಳಿಸಿಲ್ಲ.</p>.<p>ಚಿಕ್ಕಜಾಜೂರು–ಹುಬ್ಬಳ್ಳಿ ರೈಲು ಮಾರ್ಗದ ದ್ವಿಪಥ ನಿರ್ಮಾಣಕ್ಕೆ ₹ 150 ಕೋಟಿಯನ್ನು ಕೇಂದ್ರ ಸರ್ಕಾರ ತನ್ನ ಬಜೆಟ್ನಲ್ಲಿ ಮೀಸಲಿಟ್ಟಿದೆ. ಈ ಕಾಮಗಾರಿ ಈಗಾಗಲೇ ಆರಂಭವಾಗಿದ್ದು, ರಾಜ್ಯ ಸರ್ಕಾರ ಪ್ರಸಕ್ತ ಸಾಲಿನಲ್ಲಿ ತನ್ನ ಪಾಲು ನೀಡುವ ಆಶ್ವಾಸನೆ ನೀಡಿದೆ.</p>.<p class="Subhead">‘ಭದ್ರಾ ಮೇಲ್ದಂಡೆ ತ್ವರಿತ’: ಮಧ್ಯ ಕರ್ನಾಟಕದ ಬಯಲುಸೀಮೆಗೆ ನೀರಾವರಿ ಸೌಲಭ್ಯ ಕಲ್ಪಿಸುವ ಬಹು ನಿರೀಕ್ಷಿತ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ₹ 5,300 ಕೋಟಿ ಅನುದಾನವನ್ನು ನಿಗದಿಪಡಿಸಿದೆ. ರಾಷ್ಟ್ರೀಯ ಯೋಜನೆ ಘೋಷಣೆ ಮಾಡಿ ಅನುದಾನ ನೀಡಬೇಕು ಎಂಬ ರಾಜ್ಯದ ಕೋರಿಕೆಯನ್ನು ಭಾಗಶಃ ಪರಿಗಣಿಸಿರುವ ಕೇಂದ್ರ, ಉದಾರ ನೆರವು ನೀಡಿದೆ. ಈ ಕೊಡುಗೆಗೆ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಹೇಳಿರುವ ಮುಖ್ಯಮಂತ್ರಿ, ‘ಯೋಜನೆಯ ತ್ವರಿತ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ’ ಎಂದಷ್ಟೇ ತಿಳಿಸಿದ್ದಾರೆ.</p>.<p class="Subhead">ಸರ್ಕಾರಿ ವೈದ್ಯಕೀಯ ಕಾಲೇಜು:ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹ 500 ಕೋಟಿ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿಯವರು ಬಜೆಟ್ನಲ್ಲಿ ಘೋಷಿಸಿದ್ದಾರೆ. ಸ್ಥಳ ವಿವಾದದ ಕಾರಣಕ್ಕೆ ಇದು ಸಾಕಾರಗೊಳ್ಳುವುದು ಯಾವಾಗ ಎಂಬುದು ಇನ್ನೂ ಸ್ಪಷ್ಟವಾಗುತ್ತಿಲ್ಲ.</p>.<p>2013ರ ಬಜೆಟ್ನಲ್ಲಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಘೋಷಣೆಯಾಗಿತ್ತು. ಚುನಾವಣೆ, ಬಜೆಟ್ ಸಂದರ್ಭದಲ್ಲಿ ದಶಕದಿಂದಲೂ ಇದು ಚರ್ಚೆಯಾಗುತ್ತಿದೆ. ರಾಜಕೀಯ ಸ್ಥಿತ್ಯಂತರ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯ ಕಾರಣಕ್ಕೆ ಇನ್ನೂ ಅನುಷ್ಠಾನದ ಹಂತದಲ್ಲಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಕಾಲೇಜು ಸ್ಥಾಪನೆಗೆ ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಉತ್ಸುಕರಾಗಿದ್ದಾರೆ. ನಗರದ ಹೊರಗೆ ಕಾಲೇಜು ನಿರ್ಮಿಸಲು ಸಂಸದ ಎ.ನಾರಾಯಣಸ್ವಾಮಿ ಮುಂದಾಗಿದ್ದಾರೆ. ಈ ಸ್ಥಳದ ಕುರಿತ ಜಿಜ್ಞಾಸೆಯ ನಡುವೆ ಕಾಲೇಜು ಸ್ಥಾಪನೆ ಇನ್ನಷ್ಟು ವಿಳಂಬವಾಗಲಿದೆ ಎಂಬುದು ಸಾರ್ವಜನಿಕರ ಅನುಮಾನ.</p>.<p>ಬಜೆಟ್: ಜಿಲ್ಲೆಗೆ ಸಿಕ್ಕಿರುವುದು ಏನು?</p>.<p>ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಘೋಷಣೆ</p>.<p>ತುಮಕೂರು–ಚಿತ್ರದುರ್ಗ–ದಾವಣಗೆರೆ ನೇರ ರೈಲು ಮಾರ್ಗಕ್ಕೆ ರಾಜ್ಯದ ಪಾಲಿನ ಭರವಸೆ</p>.<p>ಚಿತ್ರದುರ್ಗ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹ 500 ಕೋಟಿ</p>.<p>ಚಿಕ್ಕಜಾಜೂರು–ಹುಬ್ಬಳ್ಳಿ ರೈಲ್ವೆ ದ್ವಿಪಥ ಮಾರ್ಗ ನಿರ್ಮಾಣಕ್ಕೆ ಅನುದಾನದ ಭರವಸೆ.</p>.<p>ಸಮಗ್ರ ಟೌನ್ಶಿಪ್ ನಿರ್ಮಾಣಕ್ಕೆ ಖಾಸಗಿ ಸಂಸ್ಥೆಗಳಿಗೆ ಆಹ್ವಾನ.</p>.<p>ಗಣಿಬಾಧಿತ ಪ್ರದೇಶದ ಪರಿಸರ ಪುನಶ್ಚೇತನ ಅಭಿವೃದ್ಧಿ ಯೋಜನೆಯಡಿಚಿತ್ರದುರ್ಗ ಜಿಲ್ಲೆಯ ಗಣಿಬಾಧಿತ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಕ್ಕೆ ಒತ್ತು.</p>.<p>ಮೊಳಕಾಲ್ಮುರಿನಲ್ಲಿ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಿಂದ ಕೈಗಾರಿಕಾ ವಸಾಹತು ಸ್ಥಾಪನೆ</p>.<p>ಚಿತ್ರದುರ್ಗ-ದಾವಣಗೆರೆ-ಹಾವೇರಿಯ ಆರು ಪಥದ ಹೆದ್ದಾರಿ ಅಭಿವೃದ್ಧಿಗೆ ₹2,611 ಕೋಟಿ ಅನುದಾನ</p>.<p>ಸಿರಿಧಾನ್ಯ ಬೆಳೆಗಾರರಿಗೆ ₹ 10 ಸಾವಿರ ಪ್ರೋತ್ಸಾಹ ಧನ ಮುಂದುವರಿಕೆ. ಸಿರಿಧಾನ್ಯ ಸಂಸ್ಕರಣೆ, ಗ್ರೇಡಿಂಗ್ ಹಾಗೂ ಪ್ಯಾಕಿಂಗ್ಗೆ ‘ರೈತ ಉನ್ನತಿ ಯೋಜನೆ’ಯಡಿ ಪ್ರಾಶಸ್ತ್ಯ</p>.<p>ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳ ಪ್ರೋತ್ಸಾಹ ಧನ ₹ 2,000ದಿಂದ ₹ 5,000ಕ್ಕೆ ಏರಿಕೆ</p>.<p>ವೈದ್ಯಕೀಯ ಕಾಲೇಜು ಘೋಷಣೆಯಾಗಿ ಹಲವು ವರ್ಷ ಕಳೆದರೂ ಸ್ಥಾಪನೆಗೆ ಸರ್ಕಾರ ಮೀನ–ಮೇಷ ಎಣಿಸುತ್ತಿದೆ. ಭದ್ರಾ ಮೇಲ್ದಂಡೆ ವಿಚಾರದಲ್ಲಿ ಮುಖ್ಯಮಂತ್ರಿ ಜಾಣ ಕುರುಡುತನ ಪ್ರದರ್ಶಿಸಿದ್ದಾರೆ.</p>.<p>-ಬಿ.ಎನ್. ಚಂದ್ರಪ್ಪ, ಮಾಜಿ ಸಂಸದ</p>.<p>ಜಿಲ್ಲೆಯ ಜನರ ಬಹುದಿನಗಳ ನಿರೀಕ್ಷೆಯಾದ ವೈದ್ಯಕೀಯ ಕಾಲೇಜು ಸ್ಥಾಪನೆಗೆ ₹ 500 ಕೋಟಿ ಸಿಕ್ಕಿದೆ. ಕೈಗಾರಿಕಾ ವಸಾಹತು ನಿರ್ಮಾಣ, ಸಿರಿಧಾನ್ಯ ಬೆಳೆಗಾರರಿಗೆ ಪ್ರೋತ್ಸಾಹ ನೀಡಿದ್ದು ಸ್ವಾಗತಾರ್ಹ.</p>.<p><em><strong>-ಎ.ಮುರುಳಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>