ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರಿಗೆ ಮಿಡಿದ ಮಠಾಧೀಶರು

Last Updated 11 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ಚಿತ್ರದುರ್ಗ: ಪ್ರವಾಹ ಪರಿಸ್ಥಿತಿಯಿಂದ ನೆಲೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಸೂರು ಕಲ್ಪಿಸಿ ಬದುಕು ಕಟ್ಟಿಕೊಳ್ಳಲು ನೆರವಾಗುವಂತೆ ದಲಿತ ಮತ್ತು ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟ ರಾಜ್ಯ ಸರ್ಕಾರವನ್ನು ಕೋರಿತು.

ಮಾದಾರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದ ಸಚಿವರ ನಿಯೋಗ 28 ಮಠಾಧೀಶರೊಂದಿಗೆ ಚರ್ಚೆ ನಡೆಸಿತು. ನೆರೆ ಪರಿಹಾರ ಹಾಗೂ ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಮಠಾಧೀಶರು ಮನವಿ ಮಾಡಿದರು.

ಒಕ್ಕೂಟದ ಅಧ್ಯಕ್ಷರೂ ಆಗಿರುವ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ‘ಬೆಳಗಾವಿ ಮತ್ತು ಬಾಗಲ
ಕೋಟೆ ಸೇರಿ ರಾಜ್ಯದ ಹಲವೆಡೆ ಪ್ರವಾಹಕ್ಕೆ ಜನಜೀವನ ತತ್ತರಿಸಿದೆ. ಮಠಗಳೂ ಸೇರಿ ಹಲವು ಸಂಸ್ಥೆಗಳು ವಿತರಿಸಿದ ಪರಿಹಾರ ಸಾಮಗ್ರಿಗಳು ಸಂತ್ರಸ್ತರ ಉಪಯೋಗಕ್ಕೆ ಬಂದಿವೆ. ಆದರೆ, ಬದುಕು ಕಟ್ಟಿಕೊಳ್ಳಲು ನೆರವು ನೀಡಬೇಕು’ ಎಂದು ಕೋರಿದರು.

‘ನೆರೆಗೆ ಬದುಕು ಕಳೆದುಕೊಂಡವರಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗಗಳ ಜನರೇ ಹೆಚ್ಚಾಗಿದ್ದಾರೆ. ಜೀವನ ರೂಪಿಸಿಕೊಳ್ಳಲು ಸಂತ್ರಸ್ತರಿಗೆ ಸಹಾಯ ಮಾಡಬೇಕಿದೆ. ಮಧ್ಯ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ತ್ವರಿತವಾಗಿ ಅನುಷ್ಠಾನಗೊಳ್ಳಬೇಕು. ಇದರಿಂದ ಬರ ಪರಿಸ್ಥಿತಿಯನ್ನು ಹೋಗಲಾಡಿಸಲು ಸಾಧ್ಯವಿದೆ’ ಎಂದರು.

‘ಅನುದಾನ ಕೇಳುವ ಉದ್ದೇಶದಿಂದ ಸಚಿವರ ನಿಯೋಗ ಕರೆಸಿಲ್ಲ. ದಲಿತ, ಹಿಂದುಳಿದ ಮಠಾಧೀಶರೂ ಸಮಾಜಮುಖಿ ಎಂಬುದನ್ನು ತೋರಿಸಿದ್ದೇವೆ’ ಎಂದು ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

"ಅನುದಾನ ಕೇಳುವ ಉದ್ದೇಶದಿಂದ ಸಚಿವರ ನಿಯೋಗವನ್ನು ಕರೆಸಿಲ್ಲ. ದಲಿತ ಮತ್ತು ಹಿಂದುಳಿದ ಮಠಾಧೀಶರು ಕೂಡ ಸಮಾಜಮುಖಿಯಾಗಿದ್ದಾರೆ ಎಂಬುದನ್ನು ತೋರಿಸಿದ್ದೇವೆ"
–ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ,ಮಾದಾರ ಚನ್ನಯ್ಯ ಗುರುಪೀಠ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT