<p><strong>ಸಿರಿಗೆರೆ:</strong> ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಬಳಕೆ ಹೆಚ್ಚಾಗುತ್ತಿದ್ದಂತೆ ಮನುಷ್ಯ ತನ್ನ ಸಂವೇದನಾಶೀಲತೆಯನ್ನು ಕಳೆದುಕೊಳ್ಳುತ್ತಿದ್ದಾನೆ ಎಂದು ಜಿಲ್ಲಾ ಡಯಟ್ ಉಪನ್ಯಾಸಕ ಬಸವರಾಜ್ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಸಮೀಪದ ಕಡ್ಲೇಗುದ್ದು ಗ್ರಾಮದ ಇಂದಿರಾಗಾಂಧಿ ವಸತಿಶಾಲೆ ಹಾಗೂ ಆಂಜನೇಯಸ್ವಾಮಿ ಪ್ರೌಢಶಾಲೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮನುಷ್ಯನಲ್ಲಿ ಸಂವೇದನಾಶೀಲನೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಅವರನ್ನು ರಾಷ್ಟ್ರದ ಉತ್ಪಾದಕ ಶಕ್ತಿಯನ್ನಾಗಿ ರೂಪಿಸಬೇಕು ಎಂದರು.</p>.<p>ಸೂರ್ಯ ಚಲನೆಯ ಮೂಲಕ ಕತ್ತಲು ಬೆಳಕಿನ ಆಟವನ್ನು ಆಡುತ್ತಾನೆ. ಅದನ್ನು ನಾವು ಅಮಾವಾಸ್ಯೆ ಮತ್ತು ಹುಣ್ಣಿಮೆ ಎನ್ನುತ್ತೇವೆ. ಈ ವಿಚಾರದಲ್ಲಿ ಜನರಲ್ಲಿನ ಮೂಢನಂಬಿಕೆಯನ್ನು ಹೋಗಲಾಡಿಸಿ ವೈಚಾರಿಕ ಮನೋಭಾವ ಬೆಳಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು ಎಂದು ಹವ್ಯಾಸಿ ಖಗೋಳಶಾಸ್ತ್ರಜ್ಞ ಎಚ್.ಎಸ್.ಟಿ. ಸ್ವಾಮಿ ತಿಳಿಸಿದರು.</p>.<p>ಆಂಜನೇಯಸ್ವಾಮಿ ಪ್ರೌಢಶಾಲೆ ಮುಖ್ಯಶಿಕ್ಷಕ ಕೆ.ಎನ್. ಮಹೇಶ್, ವಸತಿಶಾಲೆಯ ಪ್ರಾಂಶುಪಾಲ ರಮೇಶ್ ವೇದಿಕೆ ಮೇಲಿದ್ದರು. ಶಿಕ್ಷಕ ಟಿ. ಸಿದ್ದಪ್ಪ ಸ್ವಾಗತಿಸಿದರು. ಬಿ. ಜಯಪ್ಪ ವಂದಿಸಿದರು. ಬಿ. ಪ್ರಕಾಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳ ಬಳಕೆ ಹೆಚ್ಚಾಗುತ್ತಿದ್ದಂತೆ ಮನುಷ್ಯ ತನ್ನ ಸಂವೇದನಾಶೀಲತೆಯನ್ನು ಕಳೆದುಕೊಳ್ಳುತ್ತಿದ್ದಾನೆ ಎಂದು ಜಿಲ್ಲಾ ಡಯಟ್ ಉಪನ್ಯಾಸಕ ಬಸವರಾಜ್ ಕಳವಳ ವ್ಯಕ್ತಪಡಿಸಿದ್ದಾರೆ.</p>.<p>ಸಮೀಪದ ಕಡ್ಲೇಗುದ್ದು ಗ್ರಾಮದ ಇಂದಿರಾಗಾಂಧಿ ವಸತಿಶಾಲೆ ಹಾಗೂ ಆಂಜನೇಯಸ್ವಾಮಿ ಪ್ರೌಢಶಾಲೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮನುಷ್ಯನಲ್ಲಿ ಸಂವೇದನಾಶೀಲನೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಕರು ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಅವರನ್ನು ರಾಷ್ಟ್ರದ ಉತ್ಪಾದಕ ಶಕ್ತಿಯನ್ನಾಗಿ ರೂಪಿಸಬೇಕು ಎಂದರು.</p>.<p>ಸೂರ್ಯ ಚಲನೆಯ ಮೂಲಕ ಕತ್ತಲು ಬೆಳಕಿನ ಆಟವನ್ನು ಆಡುತ್ತಾನೆ. ಅದನ್ನು ನಾವು ಅಮಾವಾಸ್ಯೆ ಮತ್ತು ಹುಣ್ಣಿಮೆ ಎನ್ನುತ್ತೇವೆ. ಈ ವಿಚಾರದಲ್ಲಿ ಜನರಲ್ಲಿನ ಮೂಢನಂಬಿಕೆಯನ್ನು ಹೋಗಲಾಡಿಸಿ ವೈಚಾರಿಕ ಮನೋಭಾವ ಬೆಳಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು ಎಂದು ಹವ್ಯಾಸಿ ಖಗೋಳಶಾಸ್ತ್ರಜ್ಞ ಎಚ್.ಎಸ್.ಟಿ. ಸ್ವಾಮಿ ತಿಳಿಸಿದರು.</p>.<p>ಆಂಜನೇಯಸ್ವಾಮಿ ಪ್ರೌಢಶಾಲೆ ಮುಖ್ಯಶಿಕ್ಷಕ ಕೆ.ಎನ್. ಮಹೇಶ್, ವಸತಿಶಾಲೆಯ ಪ್ರಾಂಶುಪಾಲ ರಮೇಶ್ ವೇದಿಕೆ ಮೇಲಿದ್ದರು. ಶಿಕ್ಷಕ ಟಿ. ಸಿದ್ದಪ್ಪ ಸ್ವಾಗತಿಸಿದರು. ಬಿ. ಜಯಪ್ಪ ವಂದಿಸಿದರು. ಬಿ. ಪ್ರಕಾಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>