<p><strong>ಚಿತ್ರದುರ್ಗ: </strong>‘ವಿಘ್ನ, ಸಮಸ್ಯೆಗಳು ಮನುಷ್ಯರನ್ನು ಗಟ್ಟಿಗೊಳಿಸುತ್ತವೆ. ಜತೆಗೆ ಸಂಕೀರ್ಣ ಪರಿಸ್ಥಿತಿ ಎದುರಿಸುವ ಸಂದರ್ಭದಲ್ಲಿ ನಮಗೆ ನಿಸರ್ಗವೂ ಸಹಕಾರ ನೀಡಿದೆ’ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>ಮುರುಘಾಮಠದ ಅನುಭವ ಮಂಟಪದಲ್ಲಿ ಶರಣ ಸಂಸ್ಕೃತಿ ಉತ್ಸವ ಸಫಲತೆಗೆ ಶ್ರಮಿಸಿದ ಕಾರ್ಯಕರ್ತರಿಗಾಗಿ ಶನಿವಾರ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.</p>.<p>ಪ್ರತಿಯೊಬ್ಬರ ಜೀವನಕ್ಕೆ ಅನುಭವದ ಲೇಪನಬೇಕು. ಕೆಲಸ ಮಾಡುವವರ ಆಂತರ್ಯದಲ್ಲಿ ಸದುದ್ದೇಶ ಇದ್ದಾಗ ಮಾತ್ರ ಕೈಗೊಳ್ಳಬಹುದಾದ ಯಾವುದೇ ಕಾರ್ಯದಲ್ಲಾದರೂ ಸಫಲತೆ ಕಾಣಲು ಸಾಧ್ಯ ಎಂದರು.</p>.<p>ಶರಣ ಸಂಸ್ಕೃತಿ ಉತ್ಸವ ಮಧ್ಯಕರ್ನಾಟಕ ಭಾಗದ ನಾಡಹಬ್ಬ ಇದ್ದಂತೆ. ಇದು ವಿಚಾರಗಳ ಹಬ್ಬ. ಪ್ರಬುದ್ಧರು ಒಮ್ಮೊಮ್ಮೆ ಅಪ್ರಬುದ್ಧರಾಗುತ್ತಾರೆ. ಕೆಲ ಸಂದರ್ಭಗಳಲ್ಲಿ ಅಜ್ಞಾನ ಆವರಿಸಿಕೊಳ್ಳುತ್ತದೆ. ಅಂತಹ ಸಂದರ್ಭದಲ್ಲಿ ಚಿಂತನೆಯೊಂದಿಗೆ ಹೆಜ್ಜೆ ಇಡಬೇಕಾಗುತ್ತದೆ ಎಂದು ಸಲಹೆ ನೀಡಿದರು.</p>.<p>ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ‘ಉತ್ಸವದ ಯಶಸ್ಸು ಕಾರ್ಯಕರ್ತರಿಗೆ ಸಲ್ಲಬೇಕು. ಇದಕ್ಕೆ ಮೂಲ ಕಾರಣಕರ್ತರು ಶರಣರು. ಕೊರೊನಾ ಸಂದರ್ಭದಲ್ಲಿ ಜನರಿಗೆ ಸಾಂತ್ವನ ಹೇಳಿದ ಸಂತರು ಎಂದರೆ ತಪ್ಪಾಗಲಾರದು. ಮುರುಘಾಮಠಕ್ಕೆ, ಇಲ್ಲಿನ ಶರಣರಿಗೆ ವಿಚಾರಗಳ ಕೊರತೆ ಇಲ್ಲ’ ಎಂದು ಅಭಿಪ್ರಾಯಪಟ್ಟರು.</p>.<p>ಫಾದರ್ ರಾಜು, ‘ಕೋವಿಡ್ ಕಾರಣಕ್ಕೆ ಉತ್ಸವವನ್ನು ಆನ್ಲೈನ್ ಮೂಲಕ ವಿದೇಶಗಳಿಗೂ ತಲುಪಿಸಿದ್ದು, ಈ ಬಾರಿಯ ವಿಶೇಷ. ನಿಜಕ್ಕೂ ಮುರುಘಾಮಠ ಕೈಗೊಂಡ ಹೊಸ ಪ್ರಯತ್ನಕ್ಕೆ ಫಲ ಸಿಕ್ಕಿದೆ’ ಎಂದು ತಿಳಿಸಿದರು.</p>.<p>ಬಸವ ಹರಳಯ್ಯ ಸ್ವಾಮೀಜಿ, ಬಸವಶಾಂತಲಿಂಗ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಮಾಜಿ ಅಧ್ಯಕ್ಷ ಸಿ.ಮಹಲಿಂಗಪ್ಪ, ವೀರಶೈವ ಸಮಾಜದ ಅಧ್ಯಕ್ಷ ಎನ್.ಜಯಣ್ಣ, ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ಪಟೇಲ್ ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>‘ವಿಘ್ನ, ಸಮಸ್ಯೆಗಳು ಮನುಷ್ಯರನ್ನು ಗಟ್ಟಿಗೊಳಿಸುತ್ತವೆ. ಜತೆಗೆ ಸಂಕೀರ್ಣ ಪರಿಸ್ಥಿತಿ ಎದುರಿಸುವ ಸಂದರ್ಭದಲ್ಲಿ ನಮಗೆ ನಿಸರ್ಗವೂ ಸಹಕಾರ ನೀಡಿದೆ’ ಎಂದು ಶಿವಮೂರ್ತಿ ಮುರುಘಾ ಶರಣರು ಹೇಳಿದರು.</p>.<p>ಮುರುಘಾಮಠದ ಅನುಭವ ಮಂಟಪದಲ್ಲಿ ಶರಣ ಸಂಸ್ಕೃತಿ ಉತ್ಸವ ಸಫಲತೆಗೆ ಶ್ರಮಿಸಿದ ಕಾರ್ಯಕರ್ತರಿಗಾಗಿ ಶನಿವಾರ ಆಯೋಜಿಸಿದ್ದ ಅಭಿನಂದನಾ ಸಭೆಯಲ್ಲಿ ಮಾತನಾಡಿದರು.</p>.<p>ಪ್ರತಿಯೊಬ್ಬರ ಜೀವನಕ್ಕೆ ಅನುಭವದ ಲೇಪನಬೇಕು. ಕೆಲಸ ಮಾಡುವವರ ಆಂತರ್ಯದಲ್ಲಿ ಸದುದ್ದೇಶ ಇದ್ದಾಗ ಮಾತ್ರ ಕೈಗೊಳ್ಳಬಹುದಾದ ಯಾವುದೇ ಕಾರ್ಯದಲ್ಲಾದರೂ ಸಫಲತೆ ಕಾಣಲು ಸಾಧ್ಯ ಎಂದರು.</p>.<p>ಶರಣ ಸಂಸ್ಕೃತಿ ಉತ್ಸವ ಮಧ್ಯಕರ್ನಾಟಕ ಭಾಗದ ನಾಡಹಬ್ಬ ಇದ್ದಂತೆ. ಇದು ವಿಚಾರಗಳ ಹಬ್ಬ. ಪ್ರಬುದ್ಧರು ಒಮ್ಮೊಮ್ಮೆ ಅಪ್ರಬುದ್ಧರಾಗುತ್ತಾರೆ. ಕೆಲ ಸಂದರ್ಭಗಳಲ್ಲಿ ಅಜ್ಞಾನ ಆವರಿಸಿಕೊಳ್ಳುತ್ತದೆ. ಅಂತಹ ಸಂದರ್ಭದಲ್ಲಿ ಚಿಂತನೆಯೊಂದಿಗೆ ಹೆಜ್ಜೆ ಇಡಬೇಕಾಗುತ್ತದೆ ಎಂದು ಸಲಹೆ ನೀಡಿದರು.</p>.<p>ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ‘ಉತ್ಸವದ ಯಶಸ್ಸು ಕಾರ್ಯಕರ್ತರಿಗೆ ಸಲ್ಲಬೇಕು. ಇದಕ್ಕೆ ಮೂಲ ಕಾರಣಕರ್ತರು ಶರಣರು. ಕೊರೊನಾ ಸಂದರ್ಭದಲ್ಲಿ ಜನರಿಗೆ ಸಾಂತ್ವನ ಹೇಳಿದ ಸಂತರು ಎಂದರೆ ತಪ್ಪಾಗಲಾರದು. ಮುರುಘಾಮಠಕ್ಕೆ, ಇಲ್ಲಿನ ಶರಣರಿಗೆ ವಿಚಾರಗಳ ಕೊರತೆ ಇಲ್ಲ’ ಎಂದು ಅಭಿಪ್ರಾಯಪಟ್ಟರು.</p>.<p>ಫಾದರ್ ರಾಜು, ‘ಕೋವಿಡ್ ಕಾರಣಕ್ಕೆ ಉತ್ಸವವನ್ನು ಆನ್ಲೈನ್ ಮೂಲಕ ವಿದೇಶಗಳಿಗೂ ತಲುಪಿಸಿದ್ದು, ಈ ಬಾರಿಯ ವಿಶೇಷ. ನಿಜಕ್ಕೂ ಮುರುಘಾಮಠ ಕೈಗೊಂಡ ಹೊಸ ಪ್ರಯತ್ನಕ್ಕೆ ಫಲ ಸಿಕ್ಕಿದೆ’ ಎಂದು ತಿಳಿಸಿದರು.</p>.<p>ಬಸವ ಹರಳಯ್ಯ ಸ್ವಾಮೀಜಿ, ಬಸವಶಾಂತಲಿಂಗ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಮಾಜಿ ಅಧ್ಯಕ್ಷ ಸಿ.ಮಹಲಿಂಗಪ್ಪ, ವೀರಶೈವ ಸಮಾಜದ ಅಧ್ಯಕ್ಷ ಎನ್.ಜಯಣ್ಣ, ಎಂ.ಟಿ. ಮಲ್ಲಿಕಾರ್ಜುನಸ್ವಾಮಿ, ಪಟೇಲ್ ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>