ಬೆಂಗಳೂರು: ‘ನೀವು ಹಾಕಿಕೊಳ್ಳುವ ಹಸಿರು ಶಾಲಿಗೆ ಮೆತ್ತಿರುವ ಹುತಾತ್ಮ ರೈತರಾದ ಹಾವೇರಿಯ ಸಿದ್ಧಲಿಂಗಪ್ಪ ಚೂರಿ ಮತ್ತು ಪುಟ್ಟಪ್ಪ ಹೇಮಪ್ಪ ಹೊನ್ನತ್ತಿಯ ರಕ್ತದ ಕಲೆ ಮಾಸಿದೆಯೇ ಎಂದು ಆತ್ಮವಿಮರ್ಶೆ ಮಾಡಿಕೊಳ್ಳಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.
‘ರೈತರ ಮೇಲೆ ಪ್ರಮಾಣ ವಚನ ಸ್ವೀಕರಿಸಿ ನೀವು ಮುಖ್ಯಮಂತ್ರಿಯಾದ ಮೂರೇ ದಿನಕ್ಕೆ ಬಿತ್ತನೆ ಬೀಜ, ರಸಗೊಬ್ಬರ ಕೇಳಿದ ರೈತರ ಮೇಲೆ ಗುಂಡು ಹಾರಿಸಿ ಈ ಇಬ್ಬರನ್ನು ನಿಮ್ಮ ಸರ್ಕಾರ ಕೊಲೆ ಮಾಡಿತು’ ಎಂದು ಅವರು ದೂರಿದ್ದಾರೆ.