ಎಲ್ಲ ಹುದ್ದೆಗಳಿಗೆ ಭತ್ಯೆ ಮತ್ತು ವೇತನ ಶ್ರೇಣಿಯನ್ನು ಹರಿಯಾಣ ಮಾದರಿಯಲ್ಲಿ ನೀಡಲು ನಿಯಮ ರಚಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಹೊರಗುತ್ತಿಗೆ ನೌಕರರಿಗೆ ಉಂಟಾಗುತ್ತಿರುವ ಮಧ್ಯವರ್ತಿಗಳ ಹಾವಳಿ ತಪ್ಪಿಸಿ, ಇಲಾಖೆಯಿಂದಲೇ ನೇರವಾಗಿ ವೇತನ ಪಾವತಿಸಬೇಕು. ಕಾಯಂ ನೌಕರರಿಗೆ ಸಿಗುವ ಸೌಲಭ್ಯಗಳನ್ನು ಎಲ್ಲರಿಗೂ ವಿಸ್ತರಿಸಬೇಕು ಎಂದು ಆಗ್ರಹಿಸಿದರು.