ಕಟ್ಟಡ ಕಾರ್ಮಿಕರ ಹೋರಾಟದ ಫಲವಾಗಿ ಸೌಲಭ್ಯಗಳು ಸಿಗುತ್ತಿವೆ. ಕಾರ್ಮಿಕರ ಹೆಸರಿನಲ್ಲಿ ಸಾರ್ವಜನಿಕರು ಗುರುತಿನ ಚೀಟಿ ಪಡೆಯುತ್ತಿದ್ದಾರೆ. ಗಾರ್ಮೆಂಟ್ಸ್ನಲ್ಲಿ ಕೆಲಸ ಮಾಡುವವರು, ಕೃಷಿ ಕಾರ್ಮಿಕರು, ಸರ್ಕಾರಿ ನೌಕರರ ಸಂಬಂಧಿಕರು ಚೀಟಿ ಹೊಂದಿದ್ದಾರೆ. ಲಂಚ ಪಡೆದು ಗುರುತಿನ ಚೀಟಿ ನೀಡಲಾಗುತ್ತಿದೆ. ಇದರಿಂದ ಕಾರ್ಮಿಕರ ಕಲ್ಯಾಣ ಮಂಡಳಿಯ ಸೌಲಭ್ಯಗಳು ನೈಜ ಕಾರ್ಮಿಕರನ್ನು ತಲುಪುತ್ತಿಲ್ಲ ಎಂದು ಆರೋಪಿಸಿದರು.