<p><strong>ಚಿತ್ರದುರ್ಗ:</strong> ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಕಿಸಾನ್ ಸಭಾ ಪದಾಧಿಕಾರಿಗಳು ಚೋಳಗಟ್ಟ ಗ್ರಾಮ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಯಾವ ಕಾರಣಕ್ಕೂ ರಾಜ್ಯದಲ್ಲಿ ಈ ಕಾಯ್ದೆಗಳ ತಿದ್ದುಪಡಿ ಆಗಬಾರದು. ರಾಜ್ಯ ಸರ್ಕಾರ ಉತ್ತಮ ನಿರ್ಣಯ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒತ್ತಾಯಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಮನವಿ ಸಲ್ಲಿಸಿದರು.</p>.<p>ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಲಾಕ್ಡೌನ್ ಘೋಷಣೆ ವೇಳೆ ಕೇವಲ 500 ಇದ್ದ ಸೋಂಕಿತರ ಸಂಖ್ಯೆ ಈಗ 3 ಲಕ್ಷ ಗಡಿದಾಟಿದೆ. ಇದು ಹೀಗೆ ಮುಂದುವರೆದವರೆ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದರೂ ಅಚ್ಚರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸರ್ಕಾರಗಳು ಲಾಕ್ಡೌನ್ ಪರಿಸ್ಥಿತಿ ದುರುಪಯೋಗಪಡಿಸಿಕೊಂಡಿವೆ. ಇಡೀ ದೇಶದ ಕೃಷಿ ಉತ್ಪಾದನೆ ಮತ್ತು ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಒಪ್ಪಿಸಲು ಕಾನೂನು ತಿದ್ದುಪಡಿಗೆ ಮುಂದಾಗಿವೆ ಎಂದು ದೂರಿದರು.</p>.<p>ಎಐಟಿಯುಸಿ ಗೌರವಾಧ್ಯಕ್ಷ ಸಿ.ವೈ.ಶಿವರುದ್ರಪ್ಪ, ಎಐಕೆಎಸ್ ರಾಜ್ಯ ಘಟಕದ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ, ರಾಜ್ಯ ಮಂಡಳಿ ಸದಸ್ಯ ಟಿ.ಆರ್.ಉಮಾಪತಿ, ಮುಖಂಡರಾದ ಜಿ.ಸಿ.ಸುರೇಶ್ ಬಾಬು, ಕೆ.ಇ.ಸತ್ಯಕೀರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ಭೂ ಸುಧಾರಣೆ, ಎಪಿಎಂಸಿ ಹಾಗೂ ವಿದ್ಯುತ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಅಖಿಲ ಭಾರತ ಕಿಸಾನ್ ಸಭಾ ಪದಾಧಿಕಾರಿಗಳು ಚೋಳಗಟ್ಟ ಗ್ರಾಮ ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಯಾವ ಕಾರಣಕ್ಕೂ ರಾಜ್ಯದಲ್ಲಿ ಈ ಕಾಯ್ದೆಗಳ ತಿದ್ದುಪಡಿ ಆಗಬಾರದು. ರಾಜ್ಯ ಸರ್ಕಾರ ಉತ್ತಮ ನಿರ್ಣಯ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒತ್ತಾಯಿಸಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೂಲಕ ಮನವಿ ಸಲ್ಲಿಸಿದರು.</p>.<p>ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ. ಲಾಕ್ಡೌನ್ ಘೋಷಣೆ ವೇಳೆ ಕೇವಲ 500 ಇದ್ದ ಸೋಂಕಿತರ ಸಂಖ್ಯೆ ಈಗ 3 ಲಕ್ಷ ಗಡಿದಾಟಿದೆ. ಇದು ಹೀಗೆ ಮುಂದುವರೆದವರೆ ವಿಶ್ವದಲ್ಲೇ ಪ್ರಥಮ ಸ್ಥಾನ ಪಡೆದರೂ ಅಚ್ಚರಿ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸರ್ಕಾರಗಳು ಲಾಕ್ಡೌನ್ ಪರಿಸ್ಥಿತಿ ದುರುಪಯೋಗಪಡಿಸಿಕೊಂಡಿವೆ. ಇಡೀ ದೇಶದ ಕೃಷಿ ಉತ್ಪಾದನೆ ಮತ್ತು ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಒಪ್ಪಿಸಲು ಕಾನೂನು ತಿದ್ದುಪಡಿಗೆ ಮುಂದಾಗಿವೆ ಎಂದು ದೂರಿದರು.</p>.<p>ಎಐಟಿಯುಸಿ ಗೌರವಾಧ್ಯಕ್ಷ ಸಿ.ವೈ.ಶಿವರುದ್ರಪ್ಪ, ಎಐಕೆಎಸ್ ರಾಜ್ಯ ಘಟಕದ ಅಧ್ಯಕ್ಷ ದೊಡ್ಡ ಉಳ್ಳಾರ್ತಿ ಕರಿಯಣ್ಣ, ರಾಜ್ಯ ಮಂಡಳಿ ಸದಸ್ಯ ಟಿ.ಆರ್.ಉಮಾಪತಿ, ಮುಖಂಡರಾದ ಜಿ.ಸಿ.ಸುರೇಶ್ ಬಾಬು, ಕೆ.ಇ.ಸತ್ಯಕೀರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>