ಸಚಿವ ಟಿ.ಬಿ. ಜಯಚಂದ್ರ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸದನ ಸಮಿತಿಯು ನೈಸ್ ಕಂಪನಿಯ ಅಕ್ರಮಗಳ ಬಗ್ಗೆ ಸರ್ಕಾರಕ್ಕೆ ವರದಿ ನೀಡಿದೆ.
‘ನೈಸ್ ಯೋಜನೆಯಲ್ಲಿ ಅಕ್ರಮ ನಡೆದಿದೆ’ ಎಂದು ವರದಿಯಲ್ಲಿ ಹೇಳಲಾಗಿದೆ. ಸದನದಲ್ಲೂ ಈ ಕುರಿತು ಚರ್ಚೆಯಾಗಿದೆ. ಹೀಗಿದ್ದರೂ ನೈಸ್ ಕಂಪನಿಯ ಮುಖ್ಯಸ್ಥ ಅಶೋಕ್ ಖೇಣಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡಿದ್ದು ಎಷ್ಟು ಸರಿ? ಸದನ ಸಮಿತಿ ನೀಡಿದ ವರದಿಯ ಗತಿ ಏನು?