<p><strong>ಬಿ.ಜಿ.ಕೆರೆ (ಮೊಳಕಾಲ್ಮುರು): </strong>ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಬಸವೇಶ್ವರ ಬಡಾವಣೆಗೆ 150 ‘ಎ’ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಅಂಡರ್ಪಾಸ್ ನಿರ್ಮಿಸಬೇಕು ಎಂದು ಹಲವು ದಿನಗಳಿಂದ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದರೂ, ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಮಂಗಳವಾರ ಗ್ರಾಮದಲ್ಲಿ ಅಂಡರ್ಪಾಸ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>ಬಸವೇಶ್ವರ ಬಡಾವಣೆಯಲ್ಲಿ ಶಾಲಾ, ಕಾಲೇಜು, ಕಚೇರಿಗಳು, ರೈತರ ಜಮೀನುಗಳಿಗೆ ಹೋಗಲು ದಾರಿಗಳಿವೆ. ಹೆದ್ದಾರಿ ನಿರ್ಮಾಣ ಸಮಯದಲ್ಲಿ ಇಲ್ಲಿ ದಾರಿ ಬಿಡದೇ ಅವೈಜ್ಞಾನಿಕವಾಗಿ ಮಾಡಲಾಗಿದೆ. 3 ವರ್ಷಗಳಿಂದ ಈ ಬಗ್ಗೆ ಮನವಿ, ಪ್ರತಿಭಟನೆ ಮೂಲಕ ಗಮನ ಸೆಳೆಯುತ್ತಿದ್ದರೂ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಈಗ ಜನರು, ವಿದ್ಯಾರ್ಥಿಗಳು ಸಂಚರಿಸುವುದು ದುಸ್ತರವಾಗಿದೆ ಎಂದು ದೂರಿದರು.</p>.<p>ಸಮಸ್ಯೆ ತೀವ್ರವಾಗಿದ್ದರೂ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸುತ್ತಿಲ್ಲ. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುತ್ತಿಲ್ಲ. ಪ್ರಾಧಿಕಾರದವರು ಫೆಬ್ರುವರಿ 24ರಂದು ಚಿತ್ರದುರ್ಗದಲ್ಲಿ ಈ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸುವ ಭರವಸೆ ನೀಡಿದ್ದಾರೆ. ಇದನ್ನು ನೋಡಿಕೊಂಡು 25ರಿಂದ ಗ್ರಾಮದಲ್ಲಿ ಶಾಲೆಗಳಿಗೆ ಬೀಗ ಜಡಿದು ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಹೇಳಿದರು.</p>.<p>ಫೆಬ್ರುವರಿ 20ರಂದು ಜಿಲ್ಲಾಧಿಕಾರಿ ಅವರು ಗ್ರಾಮವಾಸ್ತವ್ಯಕ್ಕೆ ತಾಲ್ಲೂಕಿಗೆ ಇದೇ ಮಾರ್ಗವಾಗಿ ಬರಲಿದ್ದಾರೆ. ಅಂದು ಅವರನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಸಮಸ್ಯೆ ತೀವ್ರತೆ ಮನದಟ್ಟು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಿ. ಯೋಗೇಶ್ ಬಾಬು, ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್ ಹೇಳಿದರು.</p>.<p>ಮುಖಂಡರಾದ ಬಿ.ಟಿ. ನಾಗಭೂಷಣ, ರಾಮಾಂಜನೇಯಪ್ಪ, ಎಸ್. ಜಯಣ್ಣ, ಎಂ.ಪಿ. ನಾಗರಾಜ್, ಬಸಣ್ಣ, ತಿಪ್ಪೇಸ್ವಾಮಿ ಮತ್ತು ಹಟ್ಟಿ ಯಜಮಾನರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಿ.ಜಿ.ಕೆರೆ (ಮೊಳಕಾಲ್ಮುರು): </strong>ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಬಸವೇಶ್ವರ ಬಡಾವಣೆಗೆ 150 ‘ಎ’ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡು ಅಂಡರ್ಪಾಸ್ ನಿರ್ಮಿಸಬೇಕು ಎಂದು ಹಲವು ದಿನಗಳಿಂದ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದರೂ, ಜಿಲ್ಲಾಡಳಿತ ನಿರ್ಲಕ್ಷ್ಯ ತೋರುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಮಂಗಳವಾರ ಗ್ರಾಮದಲ್ಲಿ ಅಂಡರ್ಪಾಸ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಗ್ರಾಮ ಪಂಚಾಯಿತಿ ಆವರಣದಲ್ಲಿ ನಡೆದ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.</p>.<p>ಬಸವೇಶ್ವರ ಬಡಾವಣೆಯಲ್ಲಿ ಶಾಲಾ, ಕಾಲೇಜು, ಕಚೇರಿಗಳು, ರೈತರ ಜಮೀನುಗಳಿಗೆ ಹೋಗಲು ದಾರಿಗಳಿವೆ. ಹೆದ್ದಾರಿ ನಿರ್ಮಾಣ ಸಮಯದಲ್ಲಿ ಇಲ್ಲಿ ದಾರಿ ಬಿಡದೇ ಅವೈಜ್ಞಾನಿಕವಾಗಿ ಮಾಡಲಾಗಿದೆ. 3 ವರ್ಷಗಳಿಂದ ಈ ಬಗ್ಗೆ ಮನವಿ, ಪ್ರತಿಭಟನೆ ಮೂಲಕ ಗಮನ ಸೆಳೆಯುತ್ತಿದ್ದರೂ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಈಗ ಜನರು, ವಿದ್ಯಾರ್ಥಿಗಳು ಸಂಚರಿಸುವುದು ದುಸ್ತರವಾಗಿದೆ ಎಂದು ದೂರಿದರು.</p>.<p>ಸಮಸ್ಯೆ ತೀವ್ರವಾಗಿದ್ದರೂ ಹೆದ್ದಾರಿ ಪ್ರಾಧಿಕಾರದವರು ಸ್ಪಂದಿಸುತ್ತಿಲ್ಲ. ಜಿಲ್ಲಾಧಿಕಾರಿ ಅವರು ಸ್ಥಳಕ್ಕೆ ಬಂದು ಸಮಸ್ಯೆ ಆಲಿಸುತ್ತಿಲ್ಲ. ಪ್ರಾಧಿಕಾರದವರು ಫೆಬ್ರುವರಿ 24ರಂದು ಚಿತ್ರದುರ್ಗದಲ್ಲಿ ಈ ಕುರಿತು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸುವ ಭರವಸೆ ನೀಡಿದ್ದಾರೆ. ಇದನ್ನು ನೋಡಿಕೊಂಡು 25ರಿಂದ ಗ್ರಾಮದಲ್ಲಿ ಶಾಲೆಗಳಿಗೆ ಬೀಗ ಜಡಿದು ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ಹೇಳಿದರು.</p>.<p>ಫೆಬ್ರುವರಿ 20ರಂದು ಜಿಲ್ಲಾಧಿಕಾರಿ ಅವರು ಗ್ರಾಮವಾಸ್ತವ್ಯಕ್ಕೆ ತಾಲ್ಲೂಕಿಗೆ ಇದೇ ಮಾರ್ಗವಾಗಿ ಬರಲಿದ್ದಾರೆ. ಅಂದು ಅವರನ್ನು ಸ್ಥಳಕ್ಕೆ ಕರೆದುಕೊಂಡು ಬಂದು ಸಮಸ್ಯೆ ತೀವ್ರತೆ ಮನದಟ್ಟು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಬಿ. ಯೋಗೇಶ್ ಬಾಬು, ಸಿಪಿಐ ಕಾರ್ಯದರ್ಶಿ ಜಾಫರ್ ಷರೀಫ್ ಹೇಳಿದರು.</p>.<p>ಮುಖಂಡರಾದ ಬಿ.ಟಿ. ನಾಗಭೂಷಣ, ರಾಮಾಂಜನೇಯಪ್ಪ, ಎಸ್. ಜಯಣ್ಣ, ಎಂ.ಪಿ. ನಾಗರಾಜ್, ಬಸಣ್ಣ, ತಿಪ್ಪೇಸ್ವಾಮಿ ಮತ್ತು ಹಟ್ಟಿ ಯಜಮಾನರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>