ಬಸವೇಶ್ವರ ಬಡಾವಣೆಯಲ್ಲಿ ಶಾಲಾ, ಕಾಲೇಜು, ಕಚೇರಿಗಳು, ರೈತರ ಜಮೀನುಗಳಿಗೆ ಹೋಗಲು ದಾರಿಗಳಿವೆ. ಹೆದ್ದಾರಿ ನಿರ್ಮಾಣ ಸಮಯದಲ್ಲಿ ಇಲ್ಲಿ ದಾರಿ ಬಿಡದೇ ಅವೈಜ್ಞಾನಿಕವಾಗಿ ಮಾಡಲಾಗಿದೆ. 3 ವರ್ಷಗಳಿಂದ ಈ ಬಗ್ಗೆ ಮನವಿ, ಪ್ರತಿಭಟನೆ ಮೂಲಕ ಗಮನ ಸೆಳೆಯುತ್ತಿದ್ದರೂ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ ಕಿವಿಗೆ ಹಾಕಿಕೊಳ್ಳುತ್ತಿಲ್ಲ. ಈಗ ಜನರು, ವಿದ್ಯಾರ್ಥಿಗಳು ಸಂಚರಿಸುವುದು ದುಸ್ತರವಾಗಿದೆ ಎಂದು ದೂರಿದರು.