<p><strong>ಮೊಳಕಾಲ್ಮುರು:</strong> ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಮಂಗಳವಾರ ತಮಟೆ ಚಳವಳಿ ನಡೆಸಿದರು.</p>.<p>ಬಸ್ನಿಲ್ದಾಣದ ಆವರಣದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ತಮಟೆಗಳನ್ನು ಬಡಿಯುತ್ತಾ ಸರ್ಕಾರದ ಧೋರಣೆ ಖಂಡಿಸಿ ಘೋಷಣೆಗಳನ್ನು ಕೂಗಿದರು. ನಂತರ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಹೋರಾಟಗಾರ ಪ್ರೊ.ಬಿ. ಕೃಷ್ಣಪ್ಪ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧರಣಿ ಆರಂಭಿಸಿದರು.</p>.<p>ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಸೌಕರ್ಯ ಕಲ್ಪಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಜ್ಯ ಸರ್ಕಾರ ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಂಡು ಜಾರಿಗೆ ಮುಂದಾಗಬೇಕು. ಅಲ್ಲಿಯವರೆಗೆ ವಿವಿಧ ನೇಮಕಾತಿಗಳನ್ನು ಮುಂದೂಡಬೇಕು ಎಂದು ಸಮಿತಿ ಮುಖಂಡ ಜಿ. ಶ್ರೀನಿವಾಸಮೂರ್ತಿ ಮನವಿ ಮಾಡಿದರು.</p>.<p>ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿರಿಸಿರುವ ಎಸ್ಇಪಿ, ಟಿಎಸ್ಪಿ ವಿಶೇಷ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಈ ಅನುದಾನ ಬಳಕೆ ನಿಲ್ಲಿಸಿ ಸ್ಥಗಿತವಾಗಿರುವ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕೊಪ್ಪಳ ಜಿಲ್ಲೆಯಲ್ಲಿ ಈಚೆಗೆ ನಡೆದ ದಲಿತ ಸಮುದಾಯದ ಯಮನೂರಪ್ಪ ಕೊಲೆ ಪ್ರಕರಣ ಖಂಡನೀಯ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಮನೂರಪ್ಪ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ತಾಲ್ಲೂಕಿನ ಅನೇಕ ಕಡೆ ದಲಿತ ಸಮುದಾಯದವರಿಗೆ ಶವಸಂಸ್ಕಾರ ಮಾಡಲು ಸ್ಥಳವಿಲ್ಲದೇ ತೊಂದರೆಯಾಗಿದೆ. ಈ ಬಗ್ಗೆ ವರದಿ ತರಿಸಿಕೊಂಡು ಸ್ಥಳದ ವ್ಯವಸ್ಥೆ ಮಾಡಬೇಕು ಎಂದು ಸಮಿತಿ ತಾಲ್ಲೂಕು ಸಂಚಾಲಕ ಡಿ.ಒ. ಕರಿಬಸಪ್ಪ ಮನವಿ ಮಾಡಿದರು.</p>.<p>ತಾಲ್ಲೂಕಿನಲ್ಲಿ ಪ್ರತಿ 2 ತಿಂಗಳಿಗೊಮ್ಮೆ ದೌರ್ಜನ್ಯ ತಡೆ ಕಾಯ್ದೆ ಸಭೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು, ಅಲ್ಲಲ್ಲಿ ಕಂಡುಬರುತ್ತಿರುವ ಅಸ್ಪೃಶ್ಯತೆ ಘಟನೆಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.</p>.<p>ಸಿಪಿಐ ವಸಂತ್ ವಿ. ಆಸೋದೆ, ಶೀರಸ್ತೇದಾರ್ ಏಳುಕೋಟಿ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ನಂದೀಶ್ ಮನವಿ ಸ್ವೀಕರಿಸಿದರು.</p>.<p>ದಸಂಸಯ ರಾಯಾಪುರ ನಾಗೇಂದ್ರಪ್ಪ, ನಾಗೇಂದ್ರಪ್ಪ, ಮೊಗಲಹಳ್ಳಿ ಸಿದ್ದಾರ್ಥ, ಮಂಜಣ್ಣ, ತಿಪ್ಪೇಸ್ವಾಮಿ, ಮರಿಸ್ವಾಮಿ, ಅಜ್ಜೇರು ತಿಪ್ಪೇಸ್ವಾಮಿ, ರುದ್ರಮುನಿ, ಸೋಮಶೇಖರ್, ಪರಮೇಶ್, ಬಲರಾಮ್, ಬಸವರಾಜ್, ಹೊನ್ನೂರಸ್ವಾಮಿ, ಚಂದ್ರಣ, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಕಾರ್ಯಕರ್ತರು ಮಂಗಳವಾರ ತಮಟೆ ಚಳವಳಿ ನಡೆಸಿದರು.</p>.<p>ಬಸ್ನಿಲ್ದಾಣದ ಆವರಣದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ತಮಟೆಗಳನ್ನು ಬಡಿಯುತ್ತಾ ಸರ್ಕಾರದ ಧೋರಣೆ ಖಂಡಿಸಿ ಘೋಷಣೆಗಳನ್ನು ಕೂಗಿದರು. ನಂತರ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ದಲಿತ ಹೋರಾಟಗಾರ ಪ್ರೊ.ಬಿ. ಕೃಷ್ಣಪ್ಪ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಧರಣಿ ಆರಂಭಿಸಿದರು.</p>.<p>ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ತೀರಾ ಹಿಂದುಳಿದಿರುವ ಮಾದಿಗ ಜನಾಂಗಕ್ಕೆ ಒಳಮೀಸಲಾತಿ ಸೌಕರ್ಯ ಕಲ್ಪಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಜ್ಯ ಸರ್ಕಾರ ತಕ್ಷಣವೇ ಈ ಬಗ್ಗೆ ಕ್ರಮ ಕೈಗೊಂಡು ಜಾರಿಗೆ ಮುಂದಾಗಬೇಕು. ಅಲ್ಲಿಯವರೆಗೆ ವಿವಿಧ ನೇಮಕಾತಿಗಳನ್ನು ಮುಂದೂಡಬೇಕು ಎಂದು ಸಮಿತಿ ಮುಖಂಡ ಜಿ. ಶ್ರೀನಿವಾಸಮೂರ್ತಿ ಮನವಿ ಮಾಡಿದರು.</p>.<p>ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿರಿಸಿರುವ ಎಸ್ಇಪಿ, ಟಿಎಸ್ಪಿ ವಿಶೇಷ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿರುವುದು ಸರಿಯಲ್ಲ. ಕೂಡಲೇ ಈ ಅನುದಾನ ಬಳಕೆ ನಿಲ್ಲಿಸಿ ಸ್ಥಗಿತವಾಗಿರುವ ಕಾರ್ಯಕ್ರಮಗಳಿಗೆ ಅನುದಾನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕೊಪ್ಪಳ ಜಿಲ್ಲೆಯಲ್ಲಿ ಈಚೆಗೆ ನಡೆದ ದಲಿತ ಸಮುದಾಯದ ಯಮನೂರಪ್ಪ ಕೊಲೆ ಪ್ರಕರಣ ಖಂಡನೀಯ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಯಮನೂರಪ್ಪ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು. ತಾಲ್ಲೂಕಿನ ಅನೇಕ ಕಡೆ ದಲಿತ ಸಮುದಾಯದವರಿಗೆ ಶವಸಂಸ್ಕಾರ ಮಾಡಲು ಸ್ಥಳವಿಲ್ಲದೇ ತೊಂದರೆಯಾಗಿದೆ. ಈ ಬಗ್ಗೆ ವರದಿ ತರಿಸಿಕೊಂಡು ಸ್ಥಳದ ವ್ಯವಸ್ಥೆ ಮಾಡಬೇಕು ಎಂದು ಸಮಿತಿ ತಾಲ್ಲೂಕು ಸಂಚಾಲಕ ಡಿ.ಒ. ಕರಿಬಸಪ್ಪ ಮನವಿ ಮಾಡಿದರು.</p>.<p>ತಾಲ್ಲೂಕಿನಲ್ಲಿ ಪ್ರತಿ 2 ತಿಂಗಳಿಗೊಮ್ಮೆ ದೌರ್ಜನ್ಯ ತಡೆ ಕಾಯ್ದೆ ಸಭೆಯನ್ನು ನಡೆಸಲು ಕ್ರಮ ಕೈಗೊಳ್ಳಬೇಕು, ಅಲ್ಲಲ್ಲಿ ಕಂಡುಬರುತ್ತಿರುವ ಅಸ್ಪೃಶ್ಯತೆ ಘಟನೆಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.</p>.<p>ಸಿಪಿಐ ವಸಂತ್ ವಿ. ಆಸೋದೆ, ಶೀರಸ್ತೇದಾರ್ ಏಳುಕೋಟಿ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ನಂದೀಶ್ ಮನವಿ ಸ್ವೀಕರಿಸಿದರು.</p>.<p>ದಸಂಸಯ ರಾಯಾಪುರ ನಾಗೇಂದ್ರಪ್ಪ, ನಾಗೇಂದ್ರಪ್ಪ, ಮೊಗಲಹಳ್ಳಿ ಸಿದ್ದಾರ್ಥ, ಮಂಜಣ್ಣ, ತಿಪ್ಪೇಸ್ವಾಮಿ, ಮರಿಸ್ವಾಮಿ, ಅಜ್ಜೇರು ತಿಪ್ಪೇಸ್ವಾಮಿ, ರುದ್ರಮುನಿ, ಸೋಮಶೇಖರ್, ಪರಮೇಶ್, ಬಲರಾಮ್, ಬಸವರಾಜ್, ಹೊನ್ನೂರಸ್ವಾಮಿ, ಚಂದ್ರಣ, ಶಿವಣ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>