ತಹಶೀಲ್ದಾರ್ ಸುರೇಶ್ ಕುಮಾರ್ ಮಾತನಾಡಿ, ‘ಕೇಂದ್ರಕ್ಕೆ ನೀರು ಸರಬರಾಜು ಮಾಡುವ ಮೋಟರ್ ಹಾಳಾಗಿದ್ದರಿಂದ ಸರಬರಾಜಿನಲ್ಲಿ ತೊಂದರೆಯಾಗಿತ್ತು. ಸರಿಪಡಿಸಲಾಗಿದ್ದು, ಸಮಸ್ಯೆ ಪರಿಹಾರವಾಗಲಿದೆ’ ಎಂದರು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸುಧಾ, ‘ಸರದಿ ಪ್ರಕಾರ ಸಿಬ್ಬಂದಿ ಕೆಲಸ ಮಾಡುತ್ತಾರೆ. ಇಂದು ಹೊಸ ಸರದಿ ಬಂದಿರುವ ಕಾರಣ ಕೆಲವು ಮಾತ್ರೆ ನೀಡುವಿಕೆಯಲ್ಲಿ ವ್ಯತ್ಯಯವಾಗಿದೆ. ಕೂಡಲೇ ಸರಿಪಡಿಸಲಾಗುವುದು. ರೋಗಿಗಳಿಗೆ ಸಕಾಲಕ್ಕೆ ಸಿಬ್ಬಂದಿ ಲಭ್ಯವಾಗುವಂತೆ ಸೂಚಿಸಲಾಗುವುದು’ ಎಂದರು.