<p><strong>ಚಿತ್ರದುರ್ಗ: </strong>ವಸತಿ ರಹಿತ ಅರ್ಹರಿಗೆ ನಿವೇಶನ, ಎಲ್ಲ ಜಾತಿಯ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನೀಲಕಂಠೇಶ್ವರಸ್ವಾಮಿ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಲಾಯಿತು.</p>.<p>ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆರ್. ಕೋದಂಡರಾಮ್, ‘ದಲಿತರು ಇಂದಿಗೂ ಮೂಲಸೌಕರ್ಯಕ್ಕಾಗಿ ಹೋರಾಡುತ್ತಿರುವುದು ದುರಂತ. ಅಂಬೇಡ್ಕರ್ ಅವರ ಆಶಯಗಳನ್ನೇ ಗಾಳಿಗೆ ತೂರಲಾಗಿದೆ’ ಎಂದು ದೂರಿದರು.</p>.<p>‘ವಸತಿ, ನಿವೇಶನಕ್ಕಾಗಿ ಅರ್ಹ ಫಲಾನುಭವಿಗಳು ಹೋರಾಟ ಮಾಡಿದರು ಕೂಡ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಪ್ರಭಾವಿಗಳು ಸರ್ಕಾರದ ಸೌಲಭ್ಯ ದೋಚಿ ದಲಿತ, ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹೀಗಿದ್ದರೂ, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಪ್ರತಿಭಾವಂತ ಮಕ್ಕಳು ವಿದ್ಯಾರ್ಥಿ ವೇತನ ಇಲ್ಲದೆ, ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ನ್ಯಾಯಯುತ ಬೇಡಿಕೆ ಈಡೇರಿಸಲು ಮುಂದಾಗಬೇಕು’ ಎಂದು ಕೋರಿದರು.</p>.<p>ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಆನಂದ್ಕುಮಾರ್, ಮುಖಂಡರಾದ ಜೆ.ಇ. ಮಂಜುನಾಥ್, ಕೆ. ರಾಮಚಂದ್ರ, ಚಂದ್ರಪ್ಪ, ಪಿ.ಎಂ. ತಿಪ್ಪೇಸ್ವಾಮಿ, ಕಾಂತರಾಜ್, ಜಿ.ಆರ್. ಪ್ರಭಾಕರ್, ಸಿದ್ದಪ್ಪ, ಬಸವರಾಜ್, ರೇವಣಿಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ವಸತಿ ರಹಿತ ಅರ್ಹರಿಗೆ ನಿವೇಶನ, ಎಲ್ಲ ಜಾತಿಯ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಬೇಕು ಎಂದು ಒತ್ತಾಯಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನೀಲಕಂಠೇಶ್ವರಸ್ವಾಮಿ ದೇಗುಲದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ರಾಜ್ಯಪಾಲರಿಗೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮನವಿ ರವಾನಿಸಲಾಯಿತು.</p>.<p>ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಆರ್. ಕೋದಂಡರಾಮ್, ‘ದಲಿತರು ಇಂದಿಗೂ ಮೂಲಸೌಕರ್ಯಕ್ಕಾಗಿ ಹೋರಾಡುತ್ತಿರುವುದು ದುರಂತ. ಅಂಬೇಡ್ಕರ್ ಅವರ ಆಶಯಗಳನ್ನೇ ಗಾಳಿಗೆ ತೂರಲಾಗಿದೆ’ ಎಂದು ದೂರಿದರು.</p>.<p>‘ವಸತಿ, ನಿವೇಶನಕ್ಕಾಗಿ ಅರ್ಹ ಫಲಾನುಭವಿಗಳು ಹೋರಾಟ ಮಾಡಿದರು ಕೂಡ ಜಿಲ್ಲಾಡಳಿತ ಸ್ಪಂದಿಸುತ್ತಿಲ್ಲ. ಪ್ರಭಾವಿಗಳು ಸರ್ಕಾರದ ಸೌಲಭ್ಯ ದೋಚಿ ದಲಿತ, ಹಿಂದುಳಿದವರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹೀಗಿದ್ದರೂ, ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳ ಪ್ರತಿಭಾವಂತ ಮಕ್ಕಳು ವಿದ್ಯಾರ್ಥಿ ವೇತನ ಇಲ್ಲದೆ, ಉನ್ನತ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಇನ್ನಾದರೂ ಎಚ್ಚೆತ್ತುಕೊಂಡು ನ್ಯಾಯಯುತ ಬೇಡಿಕೆ ಈಡೇರಿಸಲು ಮುಂದಾಗಬೇಕು’ ಎಂದು ಕೋರಿದರು.</p>.<p>ಸೇನೆ ರಾಜ್ಯ ಘಟಕದ ಉಪಾಧ್ಯಕ್ಷ ಎಂ. ಆನಂದ್ಕುಮಾರ್, ಮುಖಂಡರಾದ ಜೆ.ಇ. ಮಂಜುನಾಥ್, ಕೆ. ರಾಮಚಂದ್ರ, ಚಂದ್ರಪ್ಪ, ಪಿ.ಎಂ. ತಿಪ್ಪೇಸ್ವಾಮಿ, ಕಾಂತರಾಜ್, ಜಿ.ಆರ್. ಪ್ರಭಾಕರ್, ಸಿದ್ದಪ್ಪ, ಬಸವರಾಜ್, ರೇವಣಿಸಿದ್ದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>