ಸಚಿವರಾದ ಅಶ್ವತ್ಥ ನಾರಾಯಣ ಮಾತನಾಡಿ, ಆರಗ ಜ್ಞಾನೇಂದ್ರ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಉತ್ತರಿಸಿ,‘ಈಗ ದಿನ ನಿತ್ಯ ಅಕ್ರಮದಲ್ಲಿ ಕಾಂಗ್ರೆಸ್ನವರ ಹೆಸರು ಬರುತ್ತಿವೆ. ಪ್ರಿಯಾಂಕ್ ಖರ್ಗೆ ಹೇಳಿದ ತಕ್ಷಣ ಗೃಹ ಸಚಿವ ಆರಗ ಜ್ಞಾನೇಂದ್ರ ಏಕೆ ರಾಜೀನಾಮೆ ಕೊಡಬೇಕು? ಸಚಿವರೇ ಇರಲಿ, ಯಾರೇ ಇರಲಿ ಕಾನೂನು ಚೌಕಟ್ಟಿನಲ್ಲೇ ಇರುತ್ತಾರೆ. ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ’ ಎಂದು ಸ್ಪಷ್ಟಪಡಿಸಿದರು.