<p><strong>ಚಳ್ಳಕೆರೆ:</strong> ‘ಸಮಸ್ಯೆ ಹೊತ್ತು ತರುವ ಸಾರ್ವಜನಿಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳಬೇಕು. ಅಸಭ್ಯವಾಗಿ ವರ್ತಿಸುವುದು ವೃತ್ತಿಗೆ ಶೋಭೆ ತರುವುದಿಲ್ಲ’ ಎಂದು ಪೌರಾಯುಕ್ತರು ಹಾಗೂ ಸಿಬ್ಬಂದಿಯನ್ನು ಟಿ.ರಘುಮೂರ್ತಿ ತರಾಟೆಗೆ ತೆಗೆದುಕೊಂಡರು.</p>.<p>ನಗರಸಭೆ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನಾಗರಿಕರ ಸಮಸ್ಯೆಗೆ ಸ್ಪಂದಿಸುವುದನ್ನು ಮೊದಲು ಕಲಿಯಬೇಕು. ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕರ ಕೆಲಸ ಮಾಡಿಕೊಡುವ ಸಾಮರ್ಥ್ಯ ಇಲ್ಲದ ಕಾರಣ, ಸಣ್ಣಪುಟ್ಟ ಕೆಲಸಕ್ಕಾಗಿ ಜನರು ನಿತ್ಯ ಕಚೇರಿಗೆ ಅಲೆದಾಡುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರು ಬಂದಿವೆ. ಇದೇ ರೀತಿ ಮುಂದುವರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದರು.</p>.<p>ನಗರಸಭೆಯಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ, ಪ್ರತಿದಿನ ಅಧಿಕಾರಿಗಳೇ ವಿವಿಧ ವಾರ್ಡ್ಗಳಿಗೆ ತಪ್ಪದೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸೂಚಿಸಿದರು.</p>.<p>‘ನಗರದಲ್ಲಿ ಪಾದಚಾರಿಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಮುಖ್ಯರಸ್ತೆ ಬದಿಯಲ್ಲಿರುವ ಅಕ್ರಮ ಗೂಡಂಗಡಿ, ಸಂಚಾರಿ ಹೋಟೆಲ್, ಇನ್ನಿತರ ಅಂಗಡಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ’ ಎಂದು ಆರೋಗ್ಯ ನಿರೀಕ್ಷಕರ ವಿರುದ್ಧ ಹರಿಹಾಯ್ದರು.</p>.<p>ನಗರದ ಜ್ವಲಂತ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು 15-20 ದಿನದೊಳಗೆ ಬಗೆಹರಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಸೇರಿದಂತೆ ನಗರಸಭೆ ಎಲ್ಲ ಸಿಬ್ಬಂದಿಯ ವರ್ಗಾವಣೆಗೆ ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಹಶೀಲ್ದಾರ್ ರೇಹಾನ್ಪಾಷ, ಡಿವೈಎಸ್ಪಿ ಸತ್ಯನಾರಾಯಣ ರಾವ್, ಪೌರಾಯುಕ್ತ ಜಗೆಡ್ಡಿ, ಎಂಜಿನಿಯರ್ ಲೋಕೇಶ್, ವಿನಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong> ‘ಸಮಸ್ಯೆ ಹೊತ್ತು ತರುವ ಸಾರ್ವಜನಿಕರನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಳ್ಳಬೇಕು. ಅಸಭ್ಯವಾಗಿ ವರ್ತಿಸುವುದು ವೃತ್ತಿಗೆ ಶೋಭೆ ತರುವುದಿಲ್ಲ’ ಎಂದು ಪೌರಾಯುಕ್ತರು ಹಾಗೂ ಸಿಬ್ಬಂದಿಯನ್ನು ಟಿ.ರಘುಮೂರ್ತಿ ತರಾಟೆಗೆ ತೆಗೆದುಕೊಂಡರು.</p>.<p>ನಗರಸಭೆ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.</p>.<p>ನಾಗರಿಕರ ಸಮಸ್ಯೆಗೆ ಸ್ಪಂದಿಸುವುದನ್ನು ಮೊದಲು ಕಲಿಯಬೇಕು. ಸಿಬ್ಬಂದಿಯನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾರ್ವಜನಿಕರ ಕೆಲಸ ಮಾಡಿಕೊಡುವ ಸಾಮರ್ಥ್ಯ ಇಲ್ಲದ ಕಾರಣ, ಸಣ್ಣಪುಟ್ಟ ಕೆಲಸಕ್ಕಾಗಿ ಜನರು ನಿತ್ಯ ಕಚೇರಿಗೆ ಅಲೆದಾಡುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ದೂರು ಬಂದಿವೆ. ಇದೇ ರೀತಿ ಮುಂದುವರಿದರೆ ಶಿಸ್ತು ಕ್ರಮ ಜರುಗಿಸಲಾಗುವುದು’ ಎಂದು ಪೌರಾಯುಕ್ತರಿಗೆ ಎಚ್ಚರಿಕೆ ನೀಡಿದರು.</p>.<p>ನಗರಸಭೆಯಲ್ಲಿ ಜನಪ್ರತಿನಿಧಿಗಳು ಇಲ್ಲದ ಕಾರಣ, ಪ್ರತಿದಿನ ಅಧಿಕಾರಿಗಳೇ ವಿವಿಧ ವಾರ್ಡ್ಗಳಿಗೆ ತಪ್ಪದೆ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟೇಶ್ ಸೂಚಿಸಿದರು.</p>.<p>‘ನಗರದಲ್ಲಿ ಪಾದಚಾರಿಗಳ ಓಡಾಟಕ್ಕೆ ತೀವ್ರ ತೊಂದರೆಯಾಗುತ್ತಿದೆ. ಮುಖ್ಯರಸ್ತೆ ಬದಿಯಲ್ಲಿರುವ ಅಕ್ರಮ ಗೂಡಂಗಡಿ, ಸಂಚಾರಿ ಹೋಟೆಲ್, ಇನ್ನಿತರ ಅಂಗಡಿಗಳ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ’ ಎಂದು ಆರೋಗ್ಯ ನಿರೀಕ್ಷಕರ ವಿರುದ್ಧ ಹರಿಹಾಯ್ದರು.</p>.<p>ನಗರದ ಜ್ವಲಂತ ಸಮಸ್ಯೆಗಳನ್ನು ಗುರುತಿಸಿ ಅವುಗಳನ್ನು 15-20 ದಿನದೊಳಗೆ ಬಗೆಹರಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳು ಸೇರಿದಂತೆ ನಗರಸಭೆ ಎಲ್ಲ ಸಿಬ್ಬಂದಿಯ ವರ್ಗಾವಣೆಗೆ ಆದೇಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.</p>.<p>ತಹಶೀಲ್ದಾರ್ ರೇಹಾನ್ಪಾಷ, ಡಿವೈಎಸ್ಪಿ ಸತ್ಯನಾರಾಯಣ ರಾವ್, ಪೌರಾಯುಕ್ತ ಜಗೆಡ್ಡಿ, ಎಂಜಿನಿಯರ್ ಲೋಕೇಶ್, ವಿನಯ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>