ಸರ್ಕಾರವು ಸಣ್ಣ ಹಾಗೂ ದೊಡ್ಡ ರೈತರೆನ್ನದೇ ರಾಗಿ ಖರೀದಿಗೆ ಪುನಃ ಗಣಕೀಕೃತ ವ್ಯವಸ್ಥೆ ಕಲ್ಪಿಸಬೇಕು. ಎಪಿಎಂಸಿಯಲ್ಲಿ ವಿದ್ಯುತ್ ದೀಪ, ಕುಡಿಯುವ ನೀರು ಸೌಲಭ್ಯ, ಸುಸಜ್ಜಿತ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು. ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು. ರಾಗಿ ಗುಣಮಟ್ಟ ಪರಿಶೀಲಿಸುವವರು ಹಾಗೂ ಹಮಾಲರು ರೈತರಿಂದ ಹಣ ಪಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.