ಹಿರಿಯೂರು: ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಖಿಲ ಭಾರತ ಯಾದವ ಮಹಾ ಸಭಾ ಮಹಿಳಾ ವಿಭಾಗದ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
‘ಘಾಜಿಯಾಬಾದ್ನ ಶ್ರೀಕೃಷ್ಣಭವನದಲ್ಲಿರುವ ಮಹಾಸಭಾದ ಕಚೇರಿಯಲ್ಲಿ ನ. 5ರಂದು ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ ಪ್ರಕಟಿಸಿದೆ. ಮಹಿಳಾ ವಿಭಾಗದ ಅಧ್ಯಕ್ಷೆಯನ್ನಾಗಿ ನನ್ನನ್ನು ಆಯ್ಕೆ ಮಾಡಿರುವುದು ಸಂತಸ ತಂದಿದೆ’ ಎಂದು ಪೂರ್ಣಿಮಾ ಶ್ರೀನಿವಾಸ್ ತಿಳಿಸಿದರು.
‘ದೇಶದಲ್ಲಿ ಯಾದವ ಸಮುದಾಯದ ಮಹಿಳೆಯರು ಅನುಭವಿಸುತ್ತಿರುವ ಸಮಸ್ಯೆಗಳು, ಅವುಗಳ ಪರಿಹಾರಕ್ಕೆ ಬೇಕಿರುವ ಕ್ರಮಗಳು, ಶೈಕ್ಷಣಿಕವಾಗಿ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವುದೂ ಸೇರಿ ಸಮುದಾಯದ ಸಂಘಟನೆಗೆ ಶ್ರಮಿಸುತ್ತೇನೆ’ ಎಂದು ಹೇಳಿದರು.