ಬೆಳೆಹಾನಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಕಂದಾಯ ಸಚಿವನಾಗಿ ರಾಜ್ಯದ 14 ಜಿಲ್ಲೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದ್ದೇನೆ. ಕುಮಾರಸ್ವಾಮಿ ಅವರು ಎಲ್ಲಿಗೂ ಭೇಟಿ ನೀಡಿಲ್ಲ. ವಿಧಾನಮಂಡಲ ಅಧಿವೇಶನದಲ್ಲಿಯೂ ಪಾಲ್ಗೊಂಡು ಇಂತಹ ವಿಚಾರವನ್ನು ಅವರು ಚರ್ಚಿಸುವುದಿಲ್ಲ’ ಎಂದು ಆರೋಪಿಸಿದರು.