‘ಚಿತ್ರದುರ್ಗದಲ್ಲಿ ವಾಸವಾಗಿರುವುದಾಗಿ ವಿಧಾನಪರಿಷತ್ ಚುನಾವಣೆಯ ಸಂದರ್ಭದಲ್ಲಿ ಭರವಸೆ ನೀಡಿದ್ದರು. ಆದರೆ, ಈವರೆಗೆ ಅವರು ಇಲ್ಲಿ ನೆಲೆಸಿಲ್ಲ. ಜಿಲ್ಲಾ ಪಂಚಾಯಿತಿ ಕೆಡಿಪಿ ಸಭೆಗೆ ಒಮ್ಮೆಯೂ ಭಾಗವಹಿಸಿಲ್ಲ. ಗ್ರಾಮ ಪಂಚಾಯಿತಿ ಸದಸ್ಯರಿಗೂ ಇವರ ಮುಖ ಪರಿಚಯವಿಲ್ಲ. ಜಿಲ್ಲೆಯ ಜನರ ಸಮಸ್ಯೆಗಳ ಕುರಿತು ವಿಧಾನಮಂಡಲ ಅಧಿವೇಶನದಲ್ಲಿ ಒಮ್ಮೆಯೂ ಧ್ವನಿ ಎತ್ತಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.