ಹುಳಿಯಾರು ಮಾರ್ಗವಾಗಿ ಹಿರಿಯೂರು ತಾಲ್ಲೂಕು ಪ್ರವೇಶಿಸಿದ ಜೋಡೊ ಯಾತ್ರೆಯ ಯಾತ್ರಾರ್ಥಿಗಳು ನಗರದ ಹೊರವಲಯದಲ್ಲಿ ಸೋಮವಾರ ವಿಶ್ರಾಂತಿ ಪಡೆದರು. ಬಿಡುವಿನ ಸಮಯದಲ್ಲಿ ಲಂಬಾಣಿ, ದಕ್ಕಲಿಗ, ಸುಡುಗಾಡು ಸಿದ್ದರು, ದೊಂಬಿದಾಸರು, ಕೊರಮರು, ಶಿಳ್ಳೆಕ್ಯಾತ ಹಾಗೂ ಹಂದಿಜೋಗಿ ಸಮುದಾಯದ 25ಕ್ಕೂ ಹೆಚ್ಚು ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದರು. ದೈನಂದಿನ ಜೀವನದ ಸ್ಥಿತಿ-ಗತಿ, ಪ್ರಸ್ತುತ ಸಮಾಜದಲ್ಲಿ ಅನುಭವಿಸುತ್ತಿರುವ ಕಷ್ಟ ನಷ್ಟಗಳ ಕುರಿತು ಸಮಾಲೋಚನೆ ನಡೆಸಿದರು.