ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 10 ಕೋಟಿ ಪರಿಹಾರ ನೀಡಿ: ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ರಘು ಆಚಾರ್ ಒತ್ತಾಯ

ಸರ್ಕಾರಕ್ಕೆ ವಿಧಾನಪರಿಷತ್ ಸದಸ್ಯ ರಘು ಆಚಾರ್ ಒತ್ತಾಯ
Last Updated 19 ಫೆಬ್ರುವರಿ 2021, 13:40 IST
ಅಕ್ಷರ ಗಾತ್ರ

ಚಿತ್ರದುರ್ಗ: ಜಿಲ್ಲೆಯ ಹಲವೆಡೆ ಸುರಿದ ಅಕಾಲಿಕ ಮಳೆಯಿಂದಾಗಿ ವಿವಿಧೆಡೆ ಹಾನಿಯಾಗಿದೆ. ಪರಿಹಾರ ಕಾರ್ಯಕ್ಕೆ ಸರ್ಕಾರಕೂಡಲೇ ₹10 ಕೋಟಿ ಪರಿಹಾರ ನೀಡಬೇಕು’ ಎಂದು ವಿಧಾನಪರಿಷತ್ ಸದಸ್ಯ ಜಿ.ರಘು ಆಚಾರ್ ಅವರುಕಂದಾಯ ಸಚಿವ ಆರ್. ಅಶೋಕ್‌ ಅವರಿಗೆ ಪತ್ರ ಬರೆದಿದ್ದಾರೆ.

‘ತಾಲ್ಲೂಕಿನ ಸಜ್ಜನಕೆರೆ ಹಾಗೂ ಮಲ್ಲಾಪುರ ಕೆರೆ ಕೋಡಿ ಬಿದ್ದಿವೆ. ಇದರಿಂದಾಗಿ ಗ್ರಾಮಗಳ ಕೆಲ ಮನೆಗಳಿಗೂ ನೀರು ನುಗ್ಗಿದೆ. ಭಾರಿ ಪ್ರಮಾಣದ ಮಳೆಯಿಂದಾಗಿ ಹತ್ತಾರು ಮನೆಗಳು ಕುಸಿದಿವೆ. ಕೆಲವೆಡೆ ಗೋಡೆಗಳಿಗೂ ಹಾನಿಯಾಗಿದೆ. ತೋಟ, ಜಮೀನುಗಳಿಗೆ ನೀರು ನುಗ್ಗಿ ನೂರಾರು ಎಕರೆ ಬೆಳೆಗೆ ಹಾನಿಯಾಗಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಬೇಕು’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT