‘ತಾಲ್ಲೂಕಿನ ಸಜ್ಜನಕೆರೆ ಹಾಗೂ ಮಲ್ಲಾಪುರ ಕೆರೆ ಕೋಡಿ ಬಿದ್ದಿವೆ. ಇದರಿಂದಾಗಿ ಗ್ರಾಮಗಳ ಕೆಲ ಮನೆಗಳಿಗೂ ನೀರು ನುಗ್ಗಿದೆ. ಭಾರಿ ಪ್ರಮಾಣದ ಮಳೆಯಿಂದಾಗಿ ಹತ್ತಾರು ಮನೆಗಳು ಕುಸಿದಿವೆ. ಕೆಲವೆಡೆ ಗೋಡೆಗಳಿಗೂ ಹಾನಿಯಾಗಿದೆ. ತೋಟ, ಜಮೀನುಗಳಿಗೆ ನೀರು ನುಗ್ಗಿ ನೂರಾರು ಎಕರೆ ಬೆಳೆಗೆ ಹಾನಿಯಾಗಿದೆ. ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಬೇಕು’ ಎಂದು ಮನವಿ ಮಾಡಿದ್ದಾರೆ.