<p><strong>ನಾಯಕನಹಟ್ಟಿ: </strong>ಹೋಬಳಿಯಲ್ಲಿ ಭಾನುವಾರ ಸಂಜೆ ಬೀಸಿದ ಗಾಳಿ ಮತ್ತು ಧಾರಾಕಾರಮಳೆಗೆ ವಿದ್ಯುತ್ ಪರಿವರ್ತಕಗಳು ಸೇರಿ ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ನೇರಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲಗುಂಟೆ, ಕಾಟವ್ವನಹಳ್ಳಿ, ಅನ್ನಪೂರ್ಣೇಶ್ವರಿ ಡಾಬಾ ಮುಂಭಾಗ ಮರ ಬಿದ್ದಿವೆ. ನಾಯಕನಹಟ್ಟಿ ಹಾಗೂ ತಳಕು ಹೋಬಳಿಯ ಹಲವೆಡೆ ನೂರಾರು ಮರಗಳು ಧರೆಗುರುಳಿವೆ.</p>.<p>ನೇರಲಗುಂಟೆಯಲ್ಲಿ ರಾಜ್ಯ ಹೆದ್ದಾರಿ-45ರಲ್ಲಿ ರಸ್ತೆಯಲ್ಲಿ 12ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹೋಬಳಿಯಾದ್ಯಂತ 35ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮತ್ತು 8 ರಿಂದ 12ವಿದ್ಯುತ್ ಪರಿವರ್ತಕಗಳು ಸಿಡಿಲು ಬಡಿದಯ ಸುಟ್ಟುಹೋಗಿವೆ. ಒಂದು ವಿದ್ಯುತ್ ಪರಿವರ್ತಕ ಸಿಡಿದು ಬಿದ್ದಿದೆ. ಸ್ಥಳಕ್ಕೆ ನಾಯಕನಹಟ್ಟಿ ಬೆಸ್ಕಾಂ ಶಾಖಾಧಿಕಾರಿ ಎನ್.ಬಿ. ಬೋರಯ್ಯ ಭೇಟಿ ನೀಡಿ, ವಿದ್ಯುತ್ ಕಂಬಗಳ ತೆರವು ಕಾರ್ಯಚರಣೆ ಕೈಗೊಂಡರು.</p>.<p>ತಳಕು ಗ್ರಾಮದ ಬಳಿ ಕೋಳಿ ಸಾಕಾಣಿಕೆಯ ಶೆಡ್ ನೆಲಕ್ಕುರುಳಿದೆ. ನೇರಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಮಂಚನಹಟ್ಟಿಯಲ್ಲಿ 3 ಸಿಮೆಂಟ್ ಶೀಟಿನ ಮನೆಗಳು ಮತ್ತು ಕಾಟವ್ವನಹಳ್ಳಿ ಗ್ರಾಮದಲ್ಲಿ 2 ಶೀಟಿನ ಮನೆಗಳು ಮಳೆಗಾಳಿಗೆ ಹಾನಿಗೊಳ<br />ಗಾಗಿವೆ ಎಂದು ನೇರಲಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ರಮೇಶ್ಬಾಬು ಹೇಳಿದರು.</p>.<p class="Subhead"><strong>ಸಿಡಿಲು ಬಡಿದು ಕುರಿಗಾಹಿ ಸಾವು</strong></p>.<p>ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮದಲ್ಲಿ ಭಾನುವಾರಸಿಡಿಲು ಬಡಿದು ಕುರಿಗಾಹಿ ಯುವಕ ಮೃತಪಟ್ಟಿದ್ದಾನೆ.</p>.<p>ಯಶವಂತ (19) ಮೃತಪಟ್ಟ ಯುವಕ.ಭಾನುವಾರ ಸಂಜೆ ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಬರುತ್ತಿದ್ದ ಯಶವಂತ ಜೋರು ಮಳೆ ಬರುತ್ತಿದ್ದರಿಂದ ಗ್ರಾಮದ ಹೊರವಲಯದ ಹುಣಸೆಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ.</p>.<p>ಯುವಕ ಯಶವಂತ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಡಾ.ಬಿ.ಯೋಗೀಶ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<p>ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ, ತಳಕು ಪಿಎಸ್ಐ ಮಾರುತಿ ಸ್ಥಳಕ್ಕೆ ಭೇಟಿನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ: </strong>ಹೋಬಳಿಯಲ್ಲಿ ಭಾನುವಾರ ಸಂಜೆ ಬೀಸಿದ ಗಾಳಿ ಮತ್ತು ಧಾರಾಕಾರಮಳೆಗೆ ವಿದ್ಯುತ್ ಪರಿವರ್ತಕಗಳು ಸೇರಿ ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ನೇರಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲಗುಂಟೆ, ಕಾಟವ್ವನಹಳ್ಳಿ, ಅನ್ನಪೂರ್ಣೇಶ್ವರಿ ಡಾಬಾ ಮುಂಭಾಗ ಮರ ಬಿದ್ದಿವೆ. ನಾಯಕನಹಟ್ಟಿ ಹಾಗೂ ತಳಕು ಹೋಬಳಿಯ ಹಲವೆಡೆ ನೂರಾರು ಮರಗಳು ಧರೆಗುರುಳಿವೆ.</p>.<p>ನೇರಲಗುಂಟೆಯಲ್ಲಿ ರಾಜ್ಯ ಹೆದ್ದಾರಿ-45ರಲ್ಲಿ ರಸ್ತೆಯಲ್ಲಿ 12ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಹೋಬಳಿಯಾದ್ಯಂತ 35ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮತ್ತು 8 ರಿಂದ 12ವಿದ್ಯುತ್ ಪರಿವರ್ತಕಗಳು ಸಿಡಿಲು ಬಡಿದಯ ಸುಟ್ಟುಹೋಗಿವೆ. ಒಂದು ವಿದ್ಯುತ್ ಪರಿವರ್ತಕ ಸಿಡಿದು ಬಿದ್ದಿದೆ. ಸ್ಥಳಕ್ಕೆ ನಾಯಕನಹಟ್ಟಿ ಬೆಸ್ಕಾಂ ಶಾಖಾಧಿಕಾರಿ ಎನ್.ಬಿ. ಬೋರಯ್ಯ ಭೇಟಿ ನೀಡಿ, ವಿದ್ಯುತ್ ಕಂಬಗಳ ತೆರವು ಕಾರ್ಯಚರಣೆ ಕೈಗೊಂಡರು.</p>.<p>ತಳಕು ಗ್ರಾಮದ ಬಳಿ ಕೋಳಿ ಸಾಕಾಣಿಕೆಯ ಶೆಡ್ ನೆಲಕ್ಕುರುಳಿದೆ. ನೇರಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರಮಂಚನಹಟ್ಟಿಯಲ್ಲಿ 3 ಸಿಮೆಂಟ್ ಶೀಟಿನ ಮನೆಗಳು ಮತ್ತು ಕಾಟವ್ವನಹಳ್ಳಿ ಗ್ರಾಮದಲ್ಲಿ 2 ಶೀಟಿನ ಮನೆಗಳು ಮಳೆಗಾಳಿಗೆ ಹಾನಿಗೊಳ<br />ಗಾಗಿವೆ ಎಂದು ನೇರಲಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಮ್ಮ ರಮೇಶ್ಬಾಬು ಹೇಳಿದರು.</p>.<p class="Subhead"><strong>ಸಿಡಿಲು ಬಡಿದು ಕುರಿಗಾಹಿ ಸಾವು</strong></p>.<p>ತಳಕು ಹೋಬಳಿಯ ದೇವರೆಡ್ಡಿಹಳ್ಳಿ ಗ್ರಾಮದಲ್ಲಿ ಭಾನುವಾರಸಿಡಿಲು ಬಡಿದು ಕುರಿಗಾಹಿ ಯುವಕ ಮೃತಪಟ್ಟಿದ್ದಾನೆ.</p>.<p>ಯಶವಂತ (19) ಮೃತಪಟ್ಟ ಯುವಕ.ಭಾನುವಾರ ಸಂಜೆ ಕುರಿಗಳನ್ನು ಮೇಯಿಸಿಕೊಂಡು ಮನೆಗೆ ಬರುತ್ತಿದ್ದ ಯಶವಂತ ಜೋರು ಮಳೆ ಬರುತ್ತಿದ್ದರಿಂದ ಗ್ರಾಮದ ಹೊರವಲಯದ ಹುಣಸೆಮರದ ಕೆಳಗೆ ನಿಂತಿದ್ದಾಗ ಸಿಡಿಲು ಬಡಿದಿದೆ.</p>.<p>ಯುವಕ ಯಶವಂತ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಮುಖಂಡ ಡಾ.ಬಿ.ಯೋಗೀಶ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<p>ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ, ತಳಕು ಪಿಎಸ್ಐ ಮಾರುತಿ ಸ್ಥಳಕ್ಕೆ ಭೇಟಿನೀಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>