<p><strong>ಚಿತ್ರದುರ್ಗ: </strong>ನಗರದಲ್ಲಿ ಭಾನುವಾರ ಉತ್ತಮ ಮಳೆ ಸುರಿಯಿತು. ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ, ರಾತ್ರಿಯವರೆಗೆ ಸೋನೆಯ ರೂಪ ಪಡೆಯಿತು.</p>.<p>ಅ.6ರಂದು ಧಾರಾಕಾರವಾಗಿ ಸುರಿದಿದ್ದ ಮಳೆ ಮೂರು ದಿನ ಬಿಡುವು ನೀಡಿತ್ತು. ಹೊಸದುರ್ಗ, ಹಿರಿಯೂರು, ಹೊಳಲ್ಕೆರೆ, ಚಳ್ಳಕೆರೆ ತಾಲ್ಲೂಕಿನಲ್ಲಿ ಚದುರಿದಂತೆ ಮಳೆಯಾಗಿತ್ತು. ಭಾನುವಾರ ಮತ್ತೆ ದಟ್ಟ ಮೋಡಗಳು ಕಾಣಿಸಿಕೊಂಡು ಮಳೆ ಧರೆಗೆ ಇಳಿಯಿತು. ಮಳೆ ಬರುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.</p>.<p>ಭಾನುವಾರ ಮಧ್ಯಾಹ್ನ 1.45ಕ್ಕೆ ಆರಂಭವಾದ ಮಳೆ 2.30ರವರೆಗೆ ಉತ್ತಮವಾಗಿ ಸುರಿಯಿತು. ಬಿರುಗಾಳಿ, ಗುಡುಗು ಸಹಿತ ಸುರಿದ ಮಳೆಗೆ ಅಪಾರ ಪ್ರಮಾಣದ ನೀರು ಹರಿಯಿತು. ಚರಂಡಿಗಳು ಕ್ಷಣಾರ್ಧದಲ್ಲಿ ತುಂಬಿ ರಸ್ತೆಯ ಮೇಲೆ ಹರಿದವು. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ಮೇಲ್ಸೇತುವೆ ಬಳಿ ಸಮಸ್ಯೆ ಸೃಷ್ಟಿಯಾಗಿತ್ತು.</p>.<p>ತುರುವನೂರು ಗೇಟ್ ಸಮೀಪ ಸುಮಾರು ಐದು ಅಡಿಯಷ್ಟು ನೀರು ಹರಿಯುತ್ತಿತ್ತು. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕಾರು, ದ್ವಿಚಕ್ರ ವಾಹನ ಸೇರಿ ಲಘು ವಾಹನ ಸಂಚಾರ ಸ್ಥಗಿತಗೊಂಡಿತ್ತು. ನೀರು ಹರಿದು ರಸ್ತೆ ಮೊದಲ ಸ್ಥಿತಿಗೆ ಮರಳಲು ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಹಿಡಿಯಿತು.</p>.<p>ಪ್ರತಿ ಮಳೆ ಸುರಿದಾಗಲೂ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯ ಬಳಿ ನೀರು ನಿಲ್ಲುತ್ತಿದೆ. ಕಳೆದ ವಾರ ಚರಂಡಿಯಲ್ಲಿ ಸರಾಗವಾಗಿ ಹರಿದಿದ್ದ ನೀರು ಭಾನುವಾರ ಮತ್ತೆ ರಸ್ತೆಗೆ ಚಾಚಿಕೊಂಡಿತು. ಹೆದ್ದಾರಿಯ ಎರಡೂ ಬದಿಯ ಚರಂಡಿಗಳಲ್ಲಿ ಕಸ–ಕಡ್ಡಿ ಕಟ್ಟಿಕೊಂಡಾಗ ಈ ಸ್ಥಿತಿ ನಿರ್ಮಾಣವಾಗುತ್ತದೆ. ನೀರಿನ ಹರಿವು ಕಡಿಮೆಯಾಗುವ ವರೆಗೂ ವಾಹನ ಸವಾರರು ಕಾಯುತ್ತಿದ್ದರು. ಕೆಲವರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ನಗರದಲ್ಲಿ ಭಾನುವಾರ ಉತ್ತಮ ಮಳೆ ಸುರಿಯಿತು. ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ, ರಾತ್ರಿಯವರೆಗೆ ಸೋನೆಯ ರೂಪ ಪಡೆಯಿತು.</p>.<p>ಅ.6ರಂದು ಧಾರಾಕಾರವಾಗಿ ಸುರಿದಿದ್ದ ಮಳೆ ಮೂರು ದಿನ ಬಿಡುವು ನೀಡಿತ್ತು. ಹೊಸದುರ್ಗ, ಹಿರಿಯೂರು, ಹೊಳಲ್ಕೆರೆ, ಚಳ್ಳಕೆರೆ ತಾಲ್ಲೂಕಿನಲ್ಲಿ ಚದುರಿದಂತೆ ಮಳೆಯಾಗಿತ್ತು. ಭಾನುವಾರ ಮತ್ತೆ ದಟ್ಟ ಮೋಡಗಳು ಕಾಣಿಸಿಕೊಂಡು ಮಳೆ ಧರೆಗೆ ಇಳಿಯಿತು. ಮಳೆ ಬರುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.</p>.<p>ಭಾನುವಾರ ಮಧ್ಯಾಹ್ನ 1.45ಕ್ಕೆ ಆರಂಭವಾದ ಮಳೆ 2.30ರವರೆಗೆ ಉತ್ತಮವಾಗಿ ಸುರಿಯಿತು. ಬಿರುಗಾಳಿ, ಗುಡುಗು ಸಹಿತ ಸುರಿದ ಮಳೆಗೆ ಅಪಾರ ಪ್ರಮಾಣದ ನೀರು ಹರಿಯಿತು. ಚರಂಡಿಗಳು ಕ್ಷಣಾರ್ಧದಲ್ಲಿ ತುಂಬಿ ರಸ್ತೆಯ ಮೇಲೆ ಹರಿದವು. ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನಿರ್ಮಿಸಿದ ಮೇಲ್ಸೇತುವೆ ಬಳಿ ಸಮಸ್ಯೆ ಸೃಷ್ಟಿಯಾಗಿತ್ತು.</p>.<p>ತುರುವನೂರು ಗೇಟ್ ಸಮೀಪ ಸುಮಾರು ಐದು ಅಡಿಯಷ್ಟು ನೀರು ಹರಿಯುತ್ತಿತ್ತು. ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕಾರು, ದ್ವಿಚಕ್ರ ವಾಹನ ಸೇರಿ ಲಘು ವಾಹನ ಸಂಚಾರ ಸ್ಥಗಿತಗೊಂಡಿತ್ತು. ನೀರು ಹರಿದು ರಸ್ತೆ ಮೊದಲ ಸ್ಥಿತಿಗೆ ಮರಳಲು ಸುಮಾರು ಅರ್ಧ ಗಂಟೆಗೂ ಹೆಚ್ಚು ಸಮಯ ಹಿಡಿಯಿತು.</p>.<p>ಪ್ರತಿ ಮಳೆ ಸುರಿದಾಗಲೂ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯ ಬಳಿ ನೀರು ನಿಲ್ಲುತ್ತಿದೆ. ಕಳೆದ ವಾರ ಚರಂಡಿಯಲ್ಲಿ ಸರಾಗವಾಗಿ ಹರಿದಿದ್ದ ನೀರು ಭಾನುವಾರ ಮತ್ತೆ ರಸ್ತೆಗೆ ಚಾಚಿಕೊಂಡಿತು. ಹೆದ್ದಾರಿಯ ಎರಡೂ ಬದಿಯ ಚರಂಡಿಗಳಲ್ಲಿ ಕಸ–ಕಡ್ಡಿ ಕಟ್ಟಿಕೊಂಡಾಗ ಈ ಸ್ಥಿತಿ ನಿರ್ಮಾಣವಾಗುತ್ತದೆ. ನೀರಿನ ಹರಿವು ಕಡಿಮೆಯಾಗುವ ವರೆಗೂ ವಾಹನ ಸವಾರರು ಕಾಯುತ್ತಿದ್ದರು. ಕೆಲವರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>