ರೈತರು ಮೆಕ್ಕೆಜೋಳ ಮಾರಾಟ ಮಾಡದೇ ಕಣದಲ್ಲಿ ಸಂಗ್ರಹ ಮಾಡಿದ್ದಾರೆ. ಪೂರ್ವ ಮುಂಗಾರು ಆರಂಭವಾಗಿದ್ದು, ಉಳುಮೆ ಕೈಗೊಳ್ಳಲು ರೈತರ ಬಳಿ ಹಣವಿಲ್ಲ. ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದರು.
‘ರಾಜ್ಯ ಹಾಲು ಒಕ್ಕೂಟ ಮಹಾಮಂಡಳಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೆಕ್ಕೆಜೋಳ ಖರೀದಿಗೆ ಮುಂದಾಗಿದ್ದಾರೆ. ಪ್ರತಿ ಕ್ವಿಂಟಲ್ಗೆ ₹ 1,760ರಂತೆ ಖರೀದಿಸುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ₹ 1,780 ಇದೆ. ಹೀಗಿರುವಾಗ ಅದರಲ್ಲೇ ₹ 20 ಕಡಿಮೆ ಮಾಡಿ ಜಿಪುಣತನ ತೋರಿಸುವುದು ಸರಿಯೇ’ ಎಂದು ಪ್ರಶ್ನಿಸಿದರು.