ಮೂಲತಃ ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಗ್ರಾಮದ ಸುಮಂಗಲಮ್ಮ ಮತ್ತು ವೀರಭದ್ರಪ್ಪ ದಂಪತಿ ಕೃಷಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಸುಮಾರು 70 ಎಕರೆ ಒಣ ಭೂಮಿಯಲ್ಲಿ ತೆಂಗಿನ ತೋಟ ನಿರ್ಮಿಸಿ ಮಾದರಿಯಾಗಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿದ ರಾಜ್ಯ ಸರ್ಕಾರ 2020-21ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.