‘ದೇಶವೇ ಸಂಕಷ್ಟದಲ್ಲಿರುವಾಗ ಸಂಭ್ರಮಪಡಬಾರದು’ ಎಂದು ಧಾರ್ಮಿಕ ಗುರುಗಳು ಸೂಚನೆ ನೀಡಿದ್ದರು. ಮಸೀದಿಗೆ ಹೆಚ್ಚಿನ ಸಂಖ್ಯೆ ಜನರಿಗೆ ಪ್ರವೇಶ ಇರಲಿಲ್ಲ. ಹಬ್ಬದ ಅಂಗವಾಗಿ ಧರ್ಮಗುರು, ಮೌಲ್ವಿ, ಪೇಶ್ಇಮಾಮ್, ಮೌಝಿನ್ ಹಾಗೂ ಸಿಬ್ಬಂದಿ ಒಳಗೊಂಡು ಬೆರಳೆಣಿಕೆಯಷ್ಟು ಜನರು ಮಾತ್ರ ಪ್ರಾರ್ಥನೆ ಸಲ್ಲಿಸಿದರು. ನಂತರ ಪ್ರತಿ ಮನೆಯಲ್ಲೂ ಶ್ರದ್ಧಾ–ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಲಾಯಿತು.