ತಾಲ್ಲೂಕಿನ ಐಮಂಗಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ್ದ ದಿವಾಕರ್, ‘ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ ವೈದ್ಯರು ಆಸ್ಪತ್ರೆಯಲ್ಲಿ ಹಾಜರಿರದ ಬಗ್ಗೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ, ವೈದ್ಯರು ರಜೆ ಎಂದು ಒಬ್ಬರು, ದೂರವಾಣಿ ಕರೆ ಮಾಡಿ ರಜೆ ಎಂದು ತಿಳಿಸಿದ್ದಾರೆ ಎಂದು ಮತ್ತೊಬ್ಬರು ಹೇಳಿದರು. ವೈದ್ಯರ ಪರವಾಗಿ ಬೇರೆ ಯಾರೋ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿರುವುದು ಕಂಡು ಬಂದಿದ್ದು, ಇದುಅಪರಾಧ’ ಎಂದು ಸಿಇಒ ಪತ್ರದಲ್ಲಿ ಹೇಳಿದ್ದಾರೆ.