<p><strong>ಚಿತ್ರದುರ್ಗ:</strong> ‘ಪರಿಸರಕ್ಕೆ ಅನುಗುಣವಾಗಿ ಮೂಲ ರೆಡ್ಡಿ ಸಮಾಜ ಪಂಗಡಗಳಾಗಿ ವಿಭಜನೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಸೆ.22ರಿಂದ ನಡೆಸುವ ಜಾತಿಗಣತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ರೆಡ್ಡಿ ಎಂದು ನಮೂದಿಸಬೇಕು’ ಎಂದು ಎರೆಹೊಸಹಳ್ಳಿ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಮನವಿ ಮಾಡಿದರು.</p>.<p>‘ನಮ್ಮವರು ಆರಂಭದಿಂದಲೂ ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗುತ್ತಾ ಬಂದಿದ್ದಾರೆ. ತಮ್ಮೆಲ್ಲ ಒಳ ಪಂಗಡಗಳನ್ನು ಮರೆತು ಜಾತಿ ಗಣತಿಯ 1105 ಕೋಡ್ಗೆ ತಮ್ಮ ಜಾತಿ, ಧರ್ಮ ನಮೂದಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರೆಡ್ಡಿಗಳು ತಮ್ಮ ಒಳ ಪಂಗಡಗಳನ್ನು ಮರೆತು ಒಗ್ಗಟ್ಟಾಗಬೇಕು. ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ, ಹಳೆ ಮೈಸೂರು ಭಾಗದಲ್ಲಿ ಒಂದೊಂದು ರೀತಿಯಲ್ಲಿ ಸಮಾಜದವರು ಇದ್ದಾರೆ. ಎಲ್ಲ ರೆಡ್ಡಿಗಳು ಒಗ್ಗಟ್ಟಾಗಿರಬೇಕು ಎಂಬ ಉದ್ದೇಶದಿಂದ ಅಭಿಯಾನ ನಡೆಸಲಾಗುತ್ತಿದೆ’ ಎಂದರು.</p>.<p>‘ಬೆಂಗಳೂರಿನಲ್ಲಿ ಕರ್ನಾಟಕ ರೆಡ್ಡಿಜನ ಸಂಘ ಪ್ರಾರಂಭವಾಗಿ 100 ವರ್ಷಗಳಾಗಿವೆ. ಇದರ ಸವಿನೆನಪಿಗೆ ಸೆ.24ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ರೆಡ್ಡಿಜನ ಸಂಘದ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಲಕ್ಷ್ಮಣ ರೆಡ್ಡಿ, ನಿರ್ದೇಶಕರಾದ ಎಂ.ಎ.ಕೃಷ್ಣರೆಡ್ಡಿ, ಬಾಬುರೆಡ್ಡಿ, ಭೈರತಿ, ಪ್ರಸನ್ನ, ರಾಜಾರೆಡ್ಡಿ, ಬಾಬಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ:</strong> ‘ಪರಿಸರಕ್ಕೆ ಅನುಗುಣವಾಗಿ ಮೂಲ ರೆಡ್ಡಿ ಸಮಾಜ ಪಂಗಡಗಳಾಗಿ ವಿಭಜನೆಯಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಸೆ.22ರಿಂದ ನಡೆಸುವ ಜಾತಿಗಣತಿ ಸಮೀಕ್ಷೆಯಲ್ಲಿ ಧರ್ಮದ ಕಾಲಂನಲ್ಲಿ ಹಿಂದೂ, ಜಾತಿ ಕಾಲಂನಲ್ಲಿ ರೆಡ್ಡಿ ಎಂದು ನಮೂದಿಸಬೇಕು’ ಎಂದು ಎರೆಹೊಸಹಳ್ಳಿ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ಮನವಿ ಮಾಡಿದರು.</p>.<p>‘ನಮ್ಮವರು ಆರಂಭದಿಂದಲೂ ಮೀಸಲಾತಿ ಸೌಲಭ್ಯಗಳಿಂದ ವಂಚಿತರಾಗುತ್ತಾ ಬಂದಿದ್ದಾರೆ. ತಮ್ಮೆಲ್ಲ ಒಳ ಪಂಗಡಗಳನ್ನು ಮರೆತು ಜಾತಿ ಗಣತಿಯ 1105 ಕೋಡ್ಗೆ ತಮ್ಮ ಜಾತಿ, ಧರ್ಮ ನಮೂದಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ರೆಡ್ಡಿಗಳು ತಮ್ಮ ಒಳ ಪಂಗಡಗಳನ್ನು ಮರೆತು ಒಗ್ಗಟ್ಟಾಗಬೇಕು. ಮುಂಬೈ ಕರ್ನಾಟಕ, ಹೈದರಾಬಾದ್ ಕರ್ನಾಟಕ, ಹಳೆ ಮೈಸೂರು ಭಾಗದಲ್ಲಿ ಒಂದೊಂದು ರೀತಿಯಲ್ಲಿ ಸಮಾಜದವರು ಇದ್ದಾರೆ. ಎಲ್ಲ ರೆಡ್ಡಿಗಳು ಒಗ್ಗಟ್ಟಾಗಿರಬೇಕು ಎಂಬ ಉದ್ದೇಶದಿಂದ ಅಭಿಯಾನ ನಡೆಸಲಾಗುತ್ತಿದೆ’ ಎಂದರು.</p>.<p>‘ಬೆಂಗಳೂರಿನಲ್ಲಿ ಕರ್ನಾಟಕ ರೆಡ್ಡಿಜನ ಸಂಘ ಪ್ರಾರಂಭವಾಗಿ 100 ವರ್ಷಗಳಾಗಿವೆ. ಇದರ ಸವಿನೆನಪಿಗೆ ಸೆ.24ರಂದು ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕರ್ನಾಟಕ ರೆಡ್ಡಿಜನ ಸಂಘದ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು.</p>.<p>ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಲಕ್ಷ್ಮಣ ರೆಡ್ಡಿ, ನಿರ್ದೇಶಕರಾದ ಎಂ.ಎ.ಕೃಷ್ಣರೆಡ್ಡಿ, ಬಾಬುರೆಡ್ಡಿ, ಭೈರತಿ, ಪ್ರಸನ್ನ, ರಾಜಾರೆಡ್ಡಿ, ಬಾಬಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>