ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್ ಕೊಂಚ ಓಡಾಡಿಕೊಂಡು ಕೆಲಸ ಮಾಡುತ್ತಿದ್ದಾರೆ. ಉಳಿದವರು ಪತ್ರಿಕಾ ಹೇಳಿಕೆಗಳಿಗೆ ಸೀಮಿತರಾಗಿದ್ದಾರೆ. ಎಲ್ಲ ಜನಪ್ರತಿನಿಧಿಗಳು ಮೈಚಳಿ ಬಿಟ್ಟು ಅಖಾಡಕ್ಕೆ ಧುಮುಕಿದರೆ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಾರೆ. ಇನ್ನಾದರೂ ಎಚ್ಚೆತ್ತುಕೊಂಡು ಕೆಲಸ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.