<p><strong>ಚಿತ್ರದುರ್ಗ</strong>: ಬೆಂಗಳೂರಿನ ಪಟ್ಟಣಗೆರೆಯಲ್ಲಿ ಕೊಲೆಯಾಗಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಅವರ ಸಮಾಧಿ ಸ್ಥಳ ಬುಧವಾರ ಅಸ್ತವ್ಯಸ್ತಗೊಂಡಿದೆ. </p>.<p>2024ರ ಜೂನ್ 8ರಂದು ನಡೆದಿದ್ದ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಸಹಚರರು ಬಂಧಿತರಾಗಿದ್ದು, ವಿಚಾರಣೆ ನಡೆಯುತ್ತಿದೆ. ನಗರದ ಜೋಗಿಮಟ್ಟಿ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ರೇಣುಕಸ್ವಾಮಿ ಅಂತ್ಯಕ್ರಿಯೆ ನಡೆಸಲಾಗಿತ್ತು. </p>.<p>ಸಮಾಧಿ ಸ್ಥಳದಲ್ಲಿ ರೇಣುಕಸ್ವಾಮಿ ಹೆಸರಿದ್ದ ನಾಮಫಲಕ ಅಸ್ತವ್ಯಸ್ತವಾಗಿ ಬಿದ್ದಿದ್ದು, ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.</p>.<p>ಆದರೆ, ರೇಣುಕಸ್ವಾಮಿ ಅವರ ತಂದೆ ಕಾಶಿನಾಥಯ್ಯ ಶಿವನಗೌಡರ್ ಅವರು, ‘ಪುತ್ರನ ಸಮಾಧಿಯನ್ನು ಯಾರೂ ಧ್ವಂಸ ಮಾಡಿಲ್ಲ. ವೀರಶೈವ ಸಮಾಜದಿಂದ ರುದ್ರಭೂಮಿಯ ಜಾಗದ ಸಮತಟ್ಟು ಕಾರ್ಯ ನಡೆದಿದೆ. ಇದಕ್ಕೆ ನಮ್ಮಿಂದ ತಕರಾರು ಇಲ್ಲ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಬೆಂಗಳೂರಿನ ಪಟ್ಟಣಗೆರೆಯಲ್ಲಿ ಕೊಲೆಯಾಗಿದ್ದ ಚಿತ್ರದುರ್ಗದ ರೇಣುಕಸ್ವಾಮಿ ಅವರ ಸಮಾಧಿ ಸ್ಥಳ ಬುಧವಾರ ಅಸ್ತವ್ಯಸ್ತಗೊಂಡಿದೆ. </p>.<p>2024ರ ಜೂನ್ 8ರಂದು ನಡೆದಿದ್ದ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಹಾಗೂ ಸಹಚರರು ಬಂಧಿತರಾಗಿದ್ದು, ವಿಚಾರಣೆ ನಡೆಯುತ್ತಿದೆ. ನಗರದ ಜೋಗಿಮಟ್ಟಿ ರಸ್ತೆಯ ವೀರಶೈವ ರುದ್ರಭೂಮಿಯಲ್ಲಿ ರೇಣುಕಸ್ವಾಮಿ ಅಂತ್ಯಕ್ರಿಯೆ ನಡೆಸಲಾಗಿತ್ತು. </p>.<p>ಸಮಾಧಿ ಸ್ಥಳದಲ್ಲಿ ರೇಣುಕಸ್ವಾಮಿ ಹೆಸರಿದ್ದ ನಾಮಫಲಕ ಅಸ್ತವ್ಯಸ್ತವಾಗಿ ಬಿದ್ದಿದ್ದು, ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.</p>.<p>ಆದರೆ, ರೇಣುಕಸ್ವಾಮಿ ಅವರ ತಂದೆ ಕಾಶಿನಾಥಯ್ಯ ಶಿವನಗೌಡರ್ ಅವರು, ‘ಪುತ್ರನ ಸಮಾಧಿಯನ್ನು ಯಾರೂ ಧ್ವಂಸ ಮಾಡಿಲ್ಲ. ವೀರಶೈವ ಸಮಾಜದಿಂದ ರುದ್ರಭೂಮಿಯ ಜಾಗದ ಸಮತಟ್ಟು ಕಾರ್ಯ ನಡೆದಿದೆ. ಇದಕ್ಕೆ ನಮ್ಮಿಂದ ತಕರಾರು ಇಲ್ಲ’ ಎಂದಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>