<p><strong>ಚಿತ್ರದುರ್ಗ</strong>: ‘ರೇಣುಕಸ್ವಾಮಿ ಹತ್ಯೆ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದು ಉಪ್ಪು ತಿಂದವರು ನೀರು ಕುಡಿಯಲಿ. ಮೃತನ ಕುಟುಂಬ ಸದಸ್ಯರ ಪರವಾಗಿ ಸರ್ಕಾರ ನಿಲ್ಲಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಂಗಳವಾರ ಹೇಳಿದರು.</p>.<p>ವಿಆರ್ಎಸ್ ಬಡಾವಣೆಯ ರೇಣುಕಸ್ವಾಮಿ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ರೇಣುಕಸ್ವಾಮಿ ಕುಟುಂಬ ಸದಸ್ಯರ ಪರವಾಗಿ ಸರ್ಕಾರಕ್ಕೆ ಸಹಾನುಭೂತಿ ಇದೆ. ಕುಟುಂಬ ಸದಸ್ಯರಿಗೆ ನಾನು ವೈಯಕ್ತಿಕವಾಗಿ ಸಹಾಯ ಮಾಡಿದ್ದೇನೆ. ಮೃತನ ಪತ್ನಿಗೆ ಸರ್ಕಾರಿ ಕೆಲಸ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಗೃಹಸಚಿವರು ಕೂಡ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ’ ಎಂದರು.</p>.<p>‘ಮುಖ್ಯಮಂತ್ರಿಗಳ ಪರವಾಗಿ ನಾನು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದೇನೆ. ಸಮಯ ಬಂದಾಗ ಮುಖ್ಯಮಂತ್ರಿಗಳು ಕೂಡ ರೇಣುಕಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ರೇಣುಕಸ್ವಾಮಿ ಹತ್ಯೆ ಕುರಿತಂತೆ ಸಮಗ್ರವಾದ ತನಿಖೆ ನಡೆಯಲಿದ್ದು ತಪ್ಪು ಮಾಡಿದವರು ಕಠಿಣ ಶಿಕ್ಷೆ ಅನುಭವಿಸಲಿದ್ದಾರೆ’ ಎಂದರು.</p>.<p>ವಿಜಯೇಂದ್ರ ಭೇಟಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ರೇಣುಕಸ್ವಾಮಿ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<p>‘ರೇಣುಕಸ್ವಾಮಿ ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸಬೇಕಾದ ವಿಷಯವಾಗಿದೆ. ರೇಣುಕಸ್ವಾಮಿ ಅವರ ಪತ್ನಿ ಸಹನಾ 4 ತಿಂಗಳ ಗರ್ಭಿಣಿಯಾಗಿದ್ದು ಅವರ ನೋವು ದುಃಖ ತರಿಸುತ್ತದೆ. ಅವರ ತಂದೆ– ತಾಯಿಯ ಕಣ್ಣೀರು ಕಂಡು ಬಹಳ ನೋವುಂಟಾಯಿತು’ ಎಂದರು.</p>.<p>‘ಕಿಡಿಗೇಡಿಗಳು ಅಮಾನುಷ ರೀತಿಯಲ್ಲಿ ರೇಣುಕಸ್ವಾಮಿ ಹತ್ಯೆ ಮಾಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ತನಿಖೆಯನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಇಡೀ ದೇಶದಲ್ಲಿ ಪ್ರಕರಣ ಚರ್ಚೆಯಾಗುತ್ತಿದ್ದು ಪೊಲೀಸರು ತನಿಖೆಯಲ್ಲಿ ಸಡಿಲಗೊಳಿಸಬಾರದು. ಆರೋಪಿಗಳು ಎಷ್ಟೇ ದೊಡ್ಡವರಾದರೂ ಅವರಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ರೇಣುಕಸ್ವಾಮಿ ಹತ್ಯೆ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದ್ದು ಉಪ್ಪು ತಿಂದವರು ನೀರು ಕುಡಿಯಲಿ. ಮೃತನ ಕುಟುಂಬ ಸದಸ್ಯರ ಪರವಾಗಿ ಸರ್ಕಾರ ನಿಲ್ಲಲಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಮಂಗಳವಾರ ಹೇಳಿದರು.</p>.<p>ವಿಆರ್ಎಸ್ ಬಡಾವಣೆಯ ರೇಣುಕಸ್ವಾಮಿ ಮನೆಗೆ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.</p>.<p>‘ರೇಣುಕಸ್ವಾಮಿ ಕುಟುಂಬ ಸದಸ್ಯರ ಪರವಾಗಿ ಸರ್ಕಾರಕ್ಕೆ ಸಹಾನುಭೂತಿ ಇದೆ. ಕುಟುಂಬ ಸದಸ್ಯರಿಗೆ ನಾನು ವೈಯಕ್ತಿಕವಾಗಿ ಸಹಾಯ ಮಾಡಿದ್ದೇನೆ. ಮೃತನ ಪತ್ನಿಗೆ ಸರ್ಕಾರಿ ಕೆಲಸ ನೀಡುವ ಸಂಬಂಧ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಗೃಹಸಚಿವರು ಕೂಡ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ’ ಎಂದರು.</p>.<p>‘ಮುಖ್ಯಮಂತ್ರಿಗಳ ಪರವಾಗಿ ನಾನು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದೇನೆ. ಸಮಯ ಬಂದಾಗ ಮುಖ್ಯಮಂತ್ರಿಗಳು ಕೂಡ ರೇಣುಕಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ರೇಣುಕಸ್ವಾಮಿ ಹತ್ಯೆ ಕುರಿತಂತೆ ಸಮಗ್ರವಾದ ತನಿಖೆ ನಡೆಯಲಿದ್ದು ತಪ್ಪು ಮಾಡಿದವರು ಕಠಿಣ ಶಿಕ್ಷೆ ಅನುಭವಿಸಲಿದ್ದಾರೆ’ ಎಂದರು.</p>.<p>ವಿಜಯೇಂದ್ರ ಭೇಟಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ರೇಣುಕಸ್ವಾಮಿ ಮನೆಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.</p>.<p>‘ರೇಣುಕಸ್ವಾಮಿ ಹತ್ಯೆ ಪ್ರಕರಣ ನಾಗರಿಕ ಸಮಾಜ ತಲೆತಗ್ಗಿಸಬೇಕಾದ ವಿಷಯವಾಗಿದೆ. ರೇಣುಕಸ್ವಾಮಿ ಅವರ ಪತ್ನಿ ಸಹನಾ 4 ತಿಂಗಳ ಗರ್ಭಿಣಿಯಾಗಿದ್ದು ಅವರ ನೋವು ದುಃಖ ತರಿಸುತ್ತದೆ. ಅವರ ತಂದೆ– ತಾಯಿಯ ಕಣ್ಣೀರು ಕಂಡು ಬಹಳ ನೋವುಂಟಾಯಿತು’ ಎಂದರು.</p>.<p>‘ಕಿಡಿಗೇಡಿಗಳು ಅಮಾನುಷ ರೀತಿಯಲ್ಲಿ ರೇಣುಕಸ್ವಾಮಿ ಹತ್ಯೆ ಮಾಡಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ತನಿಖೆಯನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು. ಈ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಇಡೀ ದೇಶದಲ್ಲಿ ಪ್ರಕರಣ ಚರ್ಚೆಯಾಗುತ್ತಿದ್ದು ಪೊಲೀಸರು ತನಿಖೆಯಲ್ಲಿ ಸಡಿಲಗೊಳಿಸಬಾರದು. ಆರೋಪಿಗಳು ಎಷ್ಟೇ ದೊಡ್ಡವರಾದರೂ ಅವರಿಗೆ ತಕ್ಕ ಶಿಕ್ಷೆಯಾಗಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>