<p><strong>ಚಿತ್ರದುರ್ಗ</strong>: ‘ಗಣರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಾಗುವುದರಲ್ಲಿ ಅರ್ಥವಿಲ್ಲ. ಅದರ ಕಲ್ಪನೆಯನ್ನು ಜೀವನದಲ್ಲಿ ಅನುಸರಿಸುವ ಮನೋಭಾವ ನಮ್ಮದಾಗಬೇಕು’ ಎಂದು ಉಪನ್ಯಾಸಕ ಎಂ.ವೇದಾಂತ ಏಳಂಜಿ ತಿಳಿಸಿದರು.</p>.<p>ತಾಲ್ಲೂಕಿನ ಸೀಬಾರ– ಗುತ್ತಿನಾಡು ಗ್ರಾಮದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆಯಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಂವಿಧಾನದಲ್ಲಿ ಅಳವಡಿಸಿರುವ ಮೂಲ ಕಲ್ಪನೆಗಳನ್ನು ಭಾರತೀಯರು ಅನುಸರಿಸಿದಾಗ ಮಾತ್ರ ಗಣರಾಜ್ಯಕ್ಕೆ ಸೂಕ್ತ ಅರ್ಥ ಸಿಗುತ್ತದೆ’ ಎಂದರು.</p>.<p>‘ವಿದ್ಯಾರ್ಥಿ ಜೀವನದಿಂದಲೇ ಪ್ರಜಾಪ್ರಭುತ್ವದ ಕಲ್ಪನೆ, ಕರ್ತವ್ಯಗಳನ್ನು ತಿಳಿಯಬೇಕು. ಜತೆಗೆ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಸಂಸ್ಥೆ ಅಧ್ಯಕ್ಷ ಟಿ.ಎಚ್.ಬುಡೇನ್ ಸಾಬ್ ತಿಳಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಎಂ.ನೀಲಕಂಠದೇವರು, ರೂವಾರಿ ಎಚ್.ಜಲೀಲ್ ಸಾಬ್, ಸದಸ್ಯ ಮೊಹಮ್ಮದ್ ಮಿರ್ಜಾ, ಪ್ರಾಂಶುಪಾಲೆ ಎಚ್.ಆರ್.ಸುಧಾ, ಮುಖ್ಯ ಶಿಕ್ಷಕರಾದ ಚನ್ನಬಸಪ್ಪ, ಶಿವರುದ್ರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ಗಣರಾಜ್ಯೋತ್ಸವ ಕೇವಲ ಆಚರಣೆಗೆ ಸೀಮಿತವಾಗುವುದರಲ್ಲಿ ಅರ್ಥವಿಲ್ಲ. ಅದರ ಕಲ್ಪನೆಯನ್ನು ಜೀವನದಲ್ಲಿ ಅನುಸರಿಸುವ ಮನೋಭಾವ ನಮ್ಮದಾಗಬೇಕು’ ಎಂದು ಉಪನ್ಯಾಸಕ ಎಂ.ವೇದಾಂತ ಏಳಂಜಿ ತಿಳಿಸಿದರು.</p>.<p>ತಾಲ್ಲೂಕಿನ ಸೀಬಾರ– ಗುತ್ತಿನಾಡು ಗ್ರಾಮದ ವಿಶ್ವಮಾನವ ಸಾಂಸ್ಕೃತಿಕ ಮತ್ತು ವಿದ್ಯಾಸಂಸ್ಥೆಯಲ್ಲಿ ಸೋಮವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಸಂವಿಧಾನದಲ್ಲಿ ಅಳವಡಿಸಿರುವ ಮೂಲ ಕಲ್ಪನೆಗಳನ್ನು ಭಾರತೀಯರು ಅನುಸರಿಸಿದಾಗ ಮಾತ್ರ ಗಣರಾಜ್ಯಕ್ಕೆ ಸೂಕ್ತ ಅರ್ಥ ಸಿಗುತ್ತದೆ’ ಎಂದರು.</p>.<p>‘ವಿದ್ಯಾರ್ಥಿ ಜೀವನದಿಂದಲೇ ಪ್ರಜಾಪ್ರಭುತ್ವದ ಕಲ್ಪನೆ, ಕರ್ತವ್ಯಗಳನ್ನು ತಿಳಿಯಬೇಕು. ಜತೆಗೆ ಶಿಕ್ಷಕರು ಸೂಕ್ತ ಮಾರ್ಗದರ್ಶನ ನೀಡಬೇಕು’ ಎಂದು ಸಂಸ್ಥೆ ಅಧ್ಯಕ್ಷ ಟಿ.ಎಚ್.ಬುಡೇನ್ ಸಾಬ್ ತಿಳಿಸಿದರು.</p>.<p>ಸಂಸ್ಥೆಯ ಕಾರ್ಯದರ್ಶಿ ಎಂ.ನೀಲಕಂಠದೇವರು, ರೂವಾರಿ ಎಚ್.ಜಲೀಲ್ ಸಾಬ್, ಸದಸ್ಯ ಮೊಹಮ್ಮದ್ ಮಿರ್ಜಾ, ಪ್ರಾಂಶುಪಾಲೆ ಎಚ್.ಆರ್.ಸುಧಾ, ಮುಖ್ಯ ಶಿಕ್ಷಕರಾದ ಚನ್ನಬಸಪ್ಪ, ಶಿವರುದ್ರಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>