<p><strong>ಹಿರಿಯೂರು:</strong> ಭೂಮಿ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಆರೋಪಿಸಿದರು.</p>.<p>ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಬಗರ್ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವಂತೆ ಆಗ್ರಹಿಸಿ ಯಲ್ಲದಕೆರೆ ಗ್ರಾಮದಿಂದ ಆರಂಭಿಸಿದ್ದ ಪಾದಯಾತ್ರೆಯನ್ನು ಶನಿವಾರ ತಾಲ್ಲೂಕು ಕಚೇರಿ ಬಳಿ ಸ್ವಾಗತಿಸಿ ಮಾತನಾಡಿದರು.</p>.<p>ಅಧಿಕಾರಿಗಳು ಮತ್ತು ರಾಜಕಾರಣಿಗಳು ಉಳ್ಳವರ ಪರವಾಗಿ ಕಾನೂನು ರೂಪಿಸಿ, ನಿಜವಾದ ಭೂಮಾಲೀಕರನ್ನು ಗೋಳಾಡಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಪಾದಯಾತ್ರೆಯಂತಹ ಗಾಂಧಿ ಮಾರ್ಗದ ಹೋರಾಟದ ಹಾದಿ ಹಿಡಿಯಲಾಗಿದೆ ಎಂದರು.</p>.<p>ಬಿಡಿಎಸ್ ರಾಜ್ಯಾಧ್ಯಕ್ಷ ಡಾ. ಪ್ರಕಾಶ್ ಬಿರಾದಾರ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಭೂಮಿ ಹಕ್ಕುದಾರರ ಜಿಲ್ಲಾ ಸಂಚಾಲಕ ರೂಪ ನಾಯಕ ಮಾತನಾಡಿದರು.</p>.<p>ಬಳಿಕಉಪವಿಭಾಗಾಧಿಕಾರಿ ಪ್ರಸನ್ನ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಭೂ ಹಕ್ಕುದಾರರ ವೇದಿಕೆ ಅಧ್ಯಕ್ಷ ಹುಲಗಲಕುಂಟೆ ರಂಗಸ್ವಾಮಿ, ಕಾರ್ಯದರ್ಶಿ ಜಯಣ್ಣ, ದೊಡ್ಡಘಟ್ಟ ಕುಮಾರ್, ತಿಮ್ಮರಾಜ್, ಶಶಿಕಲಾ, ಲೋಕಮ್ಮ, ವಿಠ್ಠಲ, ಪಾಂಡುರಂಗ, ರಾಮಚಂದ್ರ ಕಸವನಹಳ್ಳಿ, ನರಸಿಂಹಯ್ಯ, ವಿಜಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಭೂಮಿ ಸಾಗುವಳಿ ಮಾಡುವವರಿಗೆ ಹಕ್ಕುಪತ್ರ ನೀಡಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಆರೋಪಿಸಿದರು.</p>.<p>ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಬಗರ್ಹುಕುಂ ಮತ್ತು ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ಕೊಡುವಂತೆ ಆಗ್ರಹಿಸಿ ಯಲ್ಲದಕೆರೆ ಗ್ರಾಮದಿಂದ ಆರಂಭಿಸಿದ್ದ ಪಾದಯಾತ್ರೆಯನ್ನು ಶನಿವಾರ ತಾಲ್ಲೂಕು ಕಚೇರಿ ಬಳಿ ಸ್ವಾಗತಿಸಿ ಮಾತನಾಡಿದರು.</p>.<p>ಅಧಿಕಾರಿಗಳು ಮತ್ತು ರಾಜಕಾರಣಿಗಳು ಉಳ್ಳವರ ಪರವಾಗಿ ಕಾನೂನು ರೂಪಿಸಿ, ನಿಜವಾದ ಭೂಮಾಲೀಕರನ್ನು ಗೋಳಾಡಿಸುತ್ತಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಪಾದಯಾತ್ರೆಯಂತಹ ಗಾಂಧಿ ಮಾರ್ಗದ ಹೋರಾಟದ ಹಾದಿ ಹಿಡಿಯಲಾಗಿದೆ ಎಂದರು.</p>.<p>ಬಿಡಿಎಸ್ ರಾಜ್ಯಾಧ್ಯಕ್ಷ ಡಾ. ಪ್ರಕಾಶ್ ಬಿರಾದಾರ್, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಭೂಮಿ ಹಕ್ಕುದಾರರ ಜಿಲ್ಲಾ ಸಂಚಾಲಕ ರೂಪ ನಾಯಕ ಮಾತನಾಡಿದರು.</p>.<p>ಬಳಿಕಉಪವಿಭಾಗಾಧಿಕಾರಿ ಪ್ರಸನ್ನ ಅವರಿಗೆ ಮನವಿ ಸಲ್ಲಿಸಲಾಯಿತು.</p>.<p>ಭೂ ಹಕ್ಕುದಾರರ ವೇದಿಕೆ ಅಧ್ಯಕ್ಷ ಹುಲಗಲಕುಂಟೆ ರಂಗಸ್ವಾಮಿ, ಕಾರ್ಯದರ್ಶಿ ಜಯಣ್ಣ, ದೊಡ್ಡಘಟ್ಟ ಕುಮಾರ್, ತಿಮ್ಮರಾಜ್, ಶಶಿಕಲಾ, ಲೋಕಮ್ಮ, ವಿಠ್ಠಲ, ಪಾಂಡುರಂಗ, ರಾಮಚಂದ್ರ ಕಸವನಹಳ್ಳಿ, ನರಸಿಂಹಯ್ಯ, ವಿಜಯಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>