ಇಂದು ರಸ್ತೆ, ಕಟ್ಟಡ, ಬಾವಿ, ಕೆರೆ ಮುಂತಾದವುಗಳೆಲ್ಲವನ್ನೂ ನುಂಗಿ ನೀರು ಕುಡಿಯುವ ಪರಿಸ್ಥಿತಿ ಬಂದಿದೆ. ಇದಕ್ಕೆ ಜನರಲ್ಲಿ ನೈತಿಕ, ಸಾಂಸ್ಕೃತಿಕ ನೆಲೆಗಟ್ಟು ಕುಸಿದಿರುವುದೇ ಪ್ರಮುಖ ಕಾರಣ. ಮನೆಯಲ್ಲಿ ತಾಯಿ, ಸಮಾಜದಲ್ಲಿ ಗುರುಗಳು ಸರಿಯಾದ ಸಂಸ್ಕಾರ ನೀಡಿದರೆ ಸುಸಂಸ್ಕøತ ಸಮಾಜ ನಿರ್ಮಾಣವಾಗಲು ಸಾಧ್ಯ. ಅಂಕಗಳಿಕೆಯಲ್ಲಿ ಇಂದಿನ ವಿದ್ಯಾರ್ಥಿಗಳು ಸಾಧನೆ ಮಾಡುತ್ತಿದ್ದಾರೆ. ಆದರೆ ನೈತಿಕವಾಗಿ, ಬೌದ್ಧಿಕವಾಗಿ, ಸಾಂಸ್ಕೃತಿಕವಾಗಿ ಸಾಧನೆ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಬೇಸರಿಸಿದರು.