‘ಸರಕು ಸಾಗಣೆಗೆ ನಿರ್ಬಂಧ ವಿಧಿಸಲು ಅವಕಾಶವಿಲ್ಲ. ಆದರೂ, ಮುನ್ನೆಚ್ಚರಿಕೆ ಕೈಗೊಳ್ಳುವ ಅಗತ್ಯವಿದೆ. ಜಿಲ್ಲಾಡಳಿತದ ಗಮನಕ್ಕೆ ಬಾರದೇ ಹೊರ ಜಿಲ್ಲೆಯಿಂದ ಬರುವವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬಹುದು. ಇಂಥವರನ್ನು ಕಡ್ಡಾಯವಾಗಿ ಕ್ವಾರಂಟೈನ್ನಲ್ಲಿ ಇಡಲಾಗುವುದು. ಜನರು ಭೀತಿಗೆ ಒಳಗಾಗದೇ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದರು.