<p><strong>ಚಿತ್ರದುರ್ಗ</strong>: ‘ನಿವೃತ್ತ ನೌಕರರ ತಾಲ್ಲೂಕು ಸಂಘವನ್ನು ಜೂನ್ 15 ರಂದು ಅಸ್ತಿತ್ವಕ್ಕೆ ತರಲಾಗುತ್ತಿದೆ. ಈ ಮೂಲಕ ನೌಕರರ ಸಮಸ್ಯೆಗೆ ಸ್ಪಂದಿಸಲಾಗುತ್ತದೆ’ ಎಂದು ಸಂಘದ ಗೌರವಾಧ್ಯಕ್ಷ ನಾಗರಾಜ್ ಸಂಗಮ್ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಸಂಘ ಅಸ್ತಿತ್ವದಲ್ಲಿದೆ. ಆದರೆ ಜಿಲ್ಲಾ ಕೇಂದ್ರದಲ್ಲಿ ತಾಲ್ಲೂಕು ಸಂಘ ಸ್ಥಾಪನೆ ಆಗಿರಲಿಲ್ಲ. ಸೂಕ್ತ ಕಾಲದಲ್ಲಿ ಹಾಗೂ ತ್ವರಿತವಾಗಿ ನಿವೃತ್ತ ನೌಕರರಿಗೆ ನ್ಯಾಯ ಒದಗಿಸಲು ಆಗುತ್ತಿರಲಿಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ನಿವೃತ್ತ ನೌಕರರ ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಲಾಗಿದೆ. ಈಗಾಗಲೇ ಸಂಘವನ್ನು ನೋಂದಣಿ ಮಾಡಿಸಲಾಗಿದೆ. ನಿವೃತ್ತಿ ನೌಕರರಿಗೆ ಪ್ರತಿ ತಿಂಗಳು ಪಿಂಚಣಿ ಬಗ್ಗೆ ನಿಗಾವಹಿಸಲಾಗುತ್ತದೆ. ಕುಟುಂಬದಲ್ಲಿ ಯಾರಾದರೂ ವಿನಾಕಾರಣ ತೊಂದರೆ ನೀಡುತ್ತಿದ್ದಲ್ಲಿ ಅಂತಹ ನೌಕರರ ಸಹಾಯಕ್ಕೆ ಧಾವಿಸಲಾಗುತ್ತದೆ. ವರ್ಷದಲ್ಲಿ 2 ಬಾರಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತದೆ’ ಎಂದು ವಿವರಿಸಿದರು.</p>.<p>‘ಜೂನ್ 15ರಂದು ಸಂಘವನ್ನು ಶಾಸಕ ಕೆ.ಸಿ.ವೀರೇಂದ್ರ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ.ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಡಿವೈಎಸ್ಪಿ ಪಿ.ಕೆ.ದಿನಕರ ಭಾಗವಹಿಸಲಿದ್ದಾರೆ’ ಎಂದರು.</p>.<p>ಸಂಘದ ಅಧ್ಯಕ್ಷ ಬಿ.ಕೆ.ಹನುಮಂತಪ್ಪ, ಕಾರ್ಯಾಧ್ಯಕ್ಷ ಎಚ್.ಗೋವಿಂದಯ್ಯ, ಪ್ರಧಾನ ಕಾರ್ಯದರ್ಶಿ ಎಚ್.ಪರಮೇಶ್ವರಪ್ಪ, ಉಪಾಧ್ಯಕ್ಷರಾದ ಎಂ.ಜಿ.ಸೂರ್ಯ ನಾರಾಯಣ್, ಓ.ಮಾದಯ್ಯ, ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ‘ನಿವೃತ್ತ ನೌಕರರ ತಾಲ್ಲೂಕು ಸಂಘವನ್ನು ಜೂನ್ 15 ರಂದು ಅಸ್ತಿತ್ವಕ್ಕೆ ತರಲಾಗುತ್ತಿದೆ. ಈ ಮೂಲಕ ನೌಕರರ ಸಮಸ್ಯೆಗೆ ಸ್ಪಂದಿಸಲಾಗುತ್ತದೆ’ ಎಂದು ಸಂಘದ ಗೌರವಾಧ್ಯಕ್ಷ ನಾಗರಾಜ್ ಸಂಗಮ್ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಸಂಘ ಅಸ್ತಿತ್ವದಲ್ಲಿದೆ. ಆದರೆ ಜಿಲ್ಲಾ ಕೇಂದ್ರದಲ್ಲಿ ತಾಲ್ಲೂಕು ಸಂಘ ಸ್ಥಾಪನೆ ಆಗಿರಲಿಲ್ಲ. ಸೂಕ್ತ ಕಾಲದಲ್ಲಿ ಹಾಗೂ ತ್ವರಿತವಾಗಿ ನಿವೃತ್ತ ನೌಕರರಿಗೆ ನ್ಯಾಯ ಒದಗಿಸಲು ಆಗುತ್ತಿರಲಿಲ್ಲ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ನಿವೃತ್ತ ನೌಕರರ ಸಭೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಲಾಗಿದೆ. ಈಗಾಗಲೇ ಸಂಘವನ್ನು ನೋಂದಣಿ ಮಾಡಿಸಲಾಗಿದೆ. ನಿವೃತ್ತಿ ನೌಕರರಿಗೆ ಪ್ರತಿ ತಿಂಗಳು ಪಿಂಚಣಿ ಬಗ್ಗೆ ನಿಗಾವಹಿಸಲಾಗುತ್ತದೆ. ಕುಟುಂಬದಲ್ಲಿ ಯಾರಾದರೂ ವಿನಾಕಾರಣ ತೊಂದರೆ ನೀಡುತ್ತಿದ್ದಲ್ಲಿ ಅಂತಹ ನೌಕರರ ಸಹಾಯಕ್ಕೆ ಧಾವಿಸಲಾಗುತ್ತದೆ. ವರ್ಷದಲ್ಲಿ 2 ಬಾರಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಗುತ್ತದೆ’ ಎಂದು ವಿವರಿಸಿದರು.</p>.<p>‘ಜೂನ್ 15ರಂದು ಸಂಘವನ್ನು ಶಾಸಕ ಕೆ.ಸಿ.ವೀರೇಂದ್ರ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಂಸದ ಗೋವಿಂದ ಎಂ.ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಡಿವೈಎಸ್ಪಿ ಪಿ.ಕೆ.ದಿನಕರ ಭಾಗವಹಿಸಲಿದ್ದಾರೆ’ ಎಂದರು.</p>.<p>ಸಂಘದ ಅಧ್ಯಕ್ಷ ಬಿ.ಕೆ.ಹನುಮಂತಪ್ಪ, ಕಾರ್ಯಾಧ್ಯಕ್ಷ ಎಚ್.ಗೋವಿಂದಯ್ಯ, ಪ್ರಧಾನ ಕಾರ್ಯದರ್ಶಿ ಎಚ್.ಪರಮೇಶ್ವರಪ್ಪ, ಉಪಾಧ್ಯಕ್ಷರಾದ ಎಂ.ಜಿ.ಸೂರ್ಯ ನಾರಾಯಣ್, ಓ.ಮಾದಯ್ಯ, ಪ್ರೇಮಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>